ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ನಾಯಕರ ವಿರುದ್ಧ ಬಂಡೆದ್ದ ಖಂಡೂರಿ

By Staff
|
Google Oneindia Kannada News

BC Khanduri
ಡೆಹ್ರಾಡೂನ್ , ಆ. 26 : ಲೋಕಸಭಾ ಚುನಾವಣೆಯಲ್ಲಿನ ಸೋಲು ಮತ್ತು ಪಕ್ಷದೊಳಗಿನ ಆಂತರಿಕ ಕಚ್ಚಾಟದಿಂದ ತತ್ತರಿಸಿ ಹೋಗಿರುವ ಬಿಜೆಪಿಗೆ ಮತ್ತೊಂದು ಹೊಡೆತ ಬಿದ್ದಿದ್ದು, ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಬಿ ಸಿ ಖಂಡೂರಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಏಕೆ ಎಂದು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ ಕಂಡ ದಯನೀಯ ಸೋಲಿನ ನಂತರ ನನ್ನನ್ನು ನೇರ ಹೊಣೆಗಾರನನ್ನಾಗಿ ಮಾಡಿದ ವರಿಷ್ಟರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಸೂಚಿಸಿದರು. ಹಾಗಾದರೆ ರಾಷ್ಟ್ರಮಟ್ಟದಲ್ಲಿ ಪಕ್ಷದ ಸೋಲಿಗೆ ಯಾರು ಜವಾಬ್ದಾರಿ ತೆಗೆದುಕೊಳ್ಳುತ್ತಾರೆಂದು ಖಂಡೂರಿ ಪತ್ರದಲ್ಲಿ ಬರೆದಿದ್ದಾರೆ. ರಾಜ್ಯದಲ್ಲಿ ಈಗಲೂ ನನ್ನ ಜನಪ್ರಿಯತೆಗೆ ಧಕ್ಕೆ ಬಂದಿಲ್ಲ ಎಂದಿದ್ದಾರೆ.

ನನಗೆ 27 ಶಾಸಕರು ಭೇಷರತ್ ಬೆಂಬಲ ನೀಡಲು ಸಿದ್ದರಿದ್ದಾರೆ. ನನ್ನನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿ ಮಾಡಿ ಎಂದು ಪತ್ರದಲ್ಲಿ ಬರೆದಿದ್ದಾರೆ. ಪಕ್ಷದಲ್ಲಿನ ಇತ್ತೀಚಿನ ಬೆಳವಣಿಗೆ ಭಾರಿ ನೋವು ತಂದಿದೆ. ವಾಜಪೇಯಿ ಅವರ ಅಸ್ವಸ್ಥತೆ ನಮ್ಮನ್ನು ತುಂಬಾ ಕಾಡುತ್ತಿದೆ ಎಂದು ಖಂಡೂರಿ ಹೇಳಿಕೆ ನೀಡಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X