ಕಟ್ಟಾ ಮೇಲೆ ಹಲ್ಲೆ : 6 ಜೆಡಿಎಸ್ ಕಾರ್ಯಕರ್ತರ ಬಂಧನ
ಚನ್ನಪಟ್ಟಣ, ಆ. 27 : ಮರು ಚುನಾವಣೆ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ಅವರ ಮೇಲೆ ಹಲ್ಲೆ ಆರೋಪ ಹೊತ್ತು ತಲೆ ಮರೆಸಿಕೊಂಡಿದ್ದ 6 ಮಂದಿ ಜೆಡಿಎಸ್ ಕಾರ್ಯಕರ್ತರನ್ನು ಬಂಧಿಸುವಲ್ಲಿ ಪಟ್ಟಣ ಪೊಲೀಸರು ಯಶಸ್ವಿಯಾಗಿದ್ದಾರೆ.
ಡಿವೈಎಸ್ಪಿ ಸಿದ್ದಪ್ಪ ನೇತೃತ್ವದ ತಂಡ ಮಡಿಕೇರಿಯ ಕಾಫಿ ತೋಟವೊಂದರಲ್ಲಿ ವಾಸ್ತವ್ಯ ಹೂಡಿದ್ದ ಜೆಡಿಎಸ್ ಮುಖಂಡ ಹಾಗೂ ವಕೀಲ ಬೋಜೇಗೌಡ, ಹೊಡಿಕೆಹೊಸಹಳ್ಳಿ ನಾಗಣ್ಣ, ಮಂಗಳವಾರಪೇಟೆ ಸತ್ಯನಾರಾಯಣ, ರಮೇಶ್, ಕೂರಣಗೆರೆ ರವಿ, ಚಕ್ಕಲೂರು ಕೃಷ್ಣಪ್ಪರನ್ನು ಬಂಧಿಸಿದೆ. ಇವರ ಜತೆಗಿದ್ದ ಇನ್ನಷ್ಟು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಘಟನೆ ವಿವರ: ಕಳೆದ ಮರು ಚುನಾವಣೆ ಸಂದರ್ಭದಲ್ಲಿ ಸಚಿವ ಕಟ್ಟಾ ಸುಬ್ರಮಣ್ಯನಾಯ್ಡು, ವೆಂಕಟರಮಣಪ್ಪ ಮತ್ತು ಶಾಸಕ ಮುನಿರಾಜುರವರು ತಮ್ಮ ಪ್ರಚಾರ ಮುಗಿಸಿ, ಅಭ್ಯರ್ಥಿ ಸಿ.ಪಿ.ಯೋಗೀಶ್ವರ್ ನಿವಾಸದಿಂದ ಹೊರಟಿದ್ದಾಗ ಜೆಡಿಎಸ್ ಕಾರ್ಯಕರ್ತರು ಪಟ್ಟಣದ ಚರ್ಚ್ ರಸ್ತೆಯಲ್ಲಿ ಹಲ್ಲೆ ಮಾಡಿದರು ಎಂದು ರಾಮನಗರ ಪಟ್ಟಣ ಠಾಣೆಯಲ್ಲಿ ದಾಸರಹಳ್ಳಿ ಶಾಸಕ ಮುನಿರಾಜು ದೂರು ನೀಡಿದ್ದರು.
ಅವರ ದೂರಿನಂತೆ ಜೆಡಿಎಸ್ ಅಭ್ಯರ್ಥಿ ಪುತ್ರ ಉದಯ್, ಹೊಡಿಕೆಹೊಸಹಳ್ಳಿ ನಾಗಣ್ಣ, ಜೆಡಿಎಸ್ ಅಭ್ಯರ್ಥಿ ಸಹೋದರ ಕರಿಯಪ್ಪ, ಲಾಯರ್ ಬೋಜೇಗೌಡ, ದರ್ಶನ್, ಮಂಗಳವಾರಪೇಟೆ ಅರುಣ, ಕೇಬಲ್ ಸತ್ಯನಾರಾಯಣ, ಕೂರಣಗೆರೆ ರವಿ, ಚಕ್ಕಲೂರು ಸಿ.ಎಸ್. ಕೃಷ್ಣ, ಮಂಗಳವಾರಪೇಟೆ ರಮೇಶ್, ಕಳ್ಳಿಹೊಸೂರು ರಮೇಶ್, ಪುರುಷೋತ್ತಮ, ಕೋಟಮಾರನಹಳ್ಳಿ ಚಂದ್ರ, ಮಾಜಿ ಜಿ.ಪಂ. ಸದಸ್ಯ ಸದಾನಂದ, ಕಳ್ಳಿಹೊಸೂರು ಕಾಂತ, ರಾಜಣ್ಣ, ಪಾರ್ಥ ಸೇರಿದಂತೆ 20 ಮಂದಿಯ ಮೇಲೆ ದೂರು ನೀಡಿದ್ದರು.
ಈ ಸಂಬಂಧ ಜೆಡಿಎಸ್ ಅಭ್ಯರ್ಥಿ ಎಂ.ಸಿ. ಅಶ್ವತ್ಥ್ ಅವರ ಪುತ್ರ ದರ್ಶನ್ನನ್ನು ಚುನಾವಣೆ ದಿನವೇ ಪೊಲೀಸರು ಬಂಧಿಸಿದ್ದರು, ಇದರಿಂದ ಕುಪಿತಗೊಂಡಿದ್ದ ಜೆಡಿಎಸ್ ಕಾರ್ಯಕರ್ತರು ಅಂದು ರಸ್ತೆ ತಡೆ ನಡೆಸಿ, ಅವನನ್ನು ಬಿಡಿಸಿಕೊಂಡಿದ್ದರು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications