ಎಸ್ಕೆಎಸ್ ಸ್ವಸಹಾಯ ಸಂಘದ ಏಜೆಂಟನ ಕಗ್ಗೊಲೆ
ಶಿವಮೊಗ್ಗ, ಆ. 27 : ಹೈದರಾಬಾದ್ ಮೂಲದ ಸ್ವಸಹಾಯ ಗುಂಪಿನ ಏಜೆಂಟರಿಬ್ಬರ ಮೇಲೆ ಏಕಾಏಕೀ ದಾಳಿ ಮಾಡಿದ ಇಬ್ಬರು ಆಗಂತುಕರು ದೊಣ್ಣೆಗಳಿಂದ ತಲೆಯ ಮೇಲೆ ಹೊಡೆದು ಓರ್ವನನ್ನು ಕೊಂದಿದ್ದಲ್ಲದೆ, ಮತ್ತೋರ್ವನಿಗೆ ಎಚ್ಚರ ತಪ್ಪಿಸಿ, ಅವರ ಬಳಿಯಿದ್ದ 1.6 ಲಕ್ಷ ರೂ.ಗಳನ್ನು ದೋಚಿಕೊಂಡು ಪರಾರಿಯಾದ ಘಟನೆ ಇಂದು ಬೆಳಿಗ್ಗೆ ಲಕ್ಕಿನಕೊಪ್ಪದಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ಎಸ್.ಕೆ.ಎಸ್ ಸ್ವಸಹಾಯ ಸಂಘದ ಏಜೆಂಟರಾದ ರಾಯಚೂರು ಜಿಲ್ಲೆ ಮಾನವಿ ಸಮೀಪದ ವಾಸಿ ಶರಣಬಸಪ್ಪ (22) ಕೊಲೆಯಾದ ಯುವಕನಾಗಿದ್ದು, ಈತನ ಜೊತೆಗಿದ್ದ ಮತ್ತೋರ್ವ ಏಜೆಂಟ್ ಬೀದರ್ ಮೂಲದ ಮಾಳಪ್ಪ (22) ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ಗುರುವಾರ ಬೆಳಿಗ್ಗೆ ಶಿವಮೊಗ್ಗ ನಗರದಲ್ಲಿ ಎಸ್.ಕೆ.ಎಸ್.ಸ್ವಸಹಾಯ ಸಂಘದ ಗುಂಪುಗಳಿಂದ ಹಣವನ್ನು ಸಂಗ್ರಹಿಸಿ ಲಕ್ಕಿನಕೊಪ್ಪ ಸರ್ಕಲ್ನಿಂದ ಕಡೇಕಲ್ ಗ್ರಾಮದ ಕಡೆ ಹೊರಟಿದ್ದ ಸಂದರ್ಭದಲ್ಲಿ ಮರದ ಬುಡದಲ್ಲಿ ಬಚ್ಚಿಟ್ಟುಕುಳಿತಿದ್ದ ಇಬ್ಬರು ಆಗಂತುಕರು ಏಕಾಏಕೀ ಸಂಘದ ಏಜೆಂಟರಾದ ಶರಣಬಸಪ್ಪ ಮತ್ತು ಮಾಳಪ್ಪರವರಿಬ್ಬರ ಮೇಲೆ ಮುಗಿಬಿದ್ದರು. ದೊಣ್ಣೆಗಳಿಂದ ಇಬ್ಬರ ತಲೆಗೆ ಬಲವಾಗಿ ಹೊಡೆದರು. ಬಲವಾದ ದೊಣ್ಣೆ ಹೊಡೆತದಿಂದ ಶರಣಬಸಪ್ಪನ ತಲೆ ಹೋಳಾಗಿ ಮೆದುಳು ಹೊರಬಿದ್ದು, ಸ್ಥಳದಲ್ಲಿಯೇ ಸಾವಿಗೀಡಾದನು. ಮಾಳಪ್ಪ ಪ್ರಜ್ಞೆ ತಪ್ಪಿದ. 1.6 ಲಕ್ಷ ರೂ. ಹಣವಿದ್ದ ಬ್ಯಾಗನ್ನು ಆಗಂತುಕರು ಲಪಟಾಯಿಸಿ ಪರಾರಿಯಾದರು.
ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಎಸ್.ಮುರುಗನ್, ಡಿವೈಎಸ್ಪಿ ಶೇಖರಪ್ಪ, ತುಂಗಾನಗರ ಸಬ್ಇನ್ಸ್ಪೆಕ್ಟರ್ ಶ್ರೀನಿವಾಸ್ ಮತ್ತು ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ, ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications