ವಿಕಲಾಂಗ ಮಕ್ಕಳಿಗೆ ಉದ್ಯಾನವನ : ಸುರೇಶ್ಕುಮಾರ್
ಬೆಂಗಳೂರು, ಆ. 27 : ಬಿಬಿಎಂಪಿ ವ್ಯಾಪ್ತಿಗೆ ಬರುವ ಬೆಂಗಳೂರಿನ ಎಲ್ಲಾ ಬೃಹತ್ ಉದ್ಯಾನವನಗಳಲ್ಲಿ ವಿಕಲಚೇತನ ಮಕ್ಕಳಿಗಾಗಿ ವಿಶೇಷ ಆಟೋಪಕರಣಗಳನ್ನು ಅಳವಡಿಸಿ ವಿಶೇಷ ಉದ್ಯಾನವನ ನಿರ್ಮಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಬಿಬಿಎಂಪಿ ಗೆ ಸೂಚಿಸಲಾಗುವುದು ಎಂದು ನಗರಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ.
ರಾಜಾಜಿನಗರದ ಗಾಯತ್ರಿದೇವಿ ಉದ್ಯಾನವನದಲ್ಲಿ ವಿಕಲಚೇತನ ಮಕ್ಕಳಿಗಾಗಿ ಹೊಸದಾಗಿ ನಿರ್ಮಿಸಲಾದ ವಿಶೇಷ ಉದ್ಯಾನವನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ವಿಕಲಚೇತನ ಮಕ್ಕಳು ಸಮಾಜದ ಮುಖ್ಯವಾಹಿನಿಯಲ್ಲಿ ಇತರ ಮಕ್ಕಳಂತೆಯೇ ಸಹಜ ಆಟೋಟಗಳಲ್ಲಿ ಭಾಗಿಯಾಗಬೇಕು ಎಂಬ ಉದ್ದೇಶದಿಂದ 25 ಲಕ್ಷ ರೂ.ಗಳ ವೆಚ್ಚದಲ್ಲಿ ಈ ಮಕ್ಕಳಿಗಾಗಿ ವಿಶೇಷ ರೀತಿಯಲ್ಲಿ ವಿನ್ಯಾಸಗೊಳಿಸಲಾದ ಆಟೋಪಕರಣಗಳನ್ನು ಇಲ್ಲಿ ಅಳವಡಿಸಲಾಗಿದೆ. ಅವರಿಗಾಗಿಯೇ ವಿಶೇಷ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ ಎಂದು ಹೇಳಿದರು.
ಇಂತಹ ವಿಶೇಷ ಉದ್ಯಾನವನ ನಗರದ ಕೋಲ್ಸ್ ಪಾರ್ಕಿನ ಉದ್ಯಾನವನದಲ್ಲಿ ಮಾತ್ರ ಇತ್ತು. ಈಗ ಇಂತಹ ಸೌಲಭ್ಯ ಇರುವ ಎರಡನೆಯ ಪಾರ್ಕ್ ಎಂಬ ಹೆಗ್ಗಳಿಕೆ ಗಾಯತ್ರಿದೇವಿ ಉದ್ಯಾನವನದ್ದಾಗಿದೆ ಎಂದು ಸಚಿವ ಸುರೇಶ್ಕುಮಾರ್ ಹೇಳಿದರು. ಇಂತಹ ಉದ್ಯಾನವನಗಳು ಹೆಚ್ಚು ಅಗತ್ಯವಿದೆ. ಏಕೆಂದರೆ ವಿಕಲಚೇತನ ಮಕ್ಕಳು ಇತರ ಮಕ್ಕಳಂತೆ ಸಹಜ ಉಲ್ಲಾಸದಿಂದ ಆಟ ಪಾಠಗಳಲ್ಲಿ ಭಾಗಿಯಾಗಬೇಕು. ಇದರಿಂದ ಅವರ ಮನೋವಿಕಾಸವು ಹೆಚ್ಚಾಗುತ್ತದೆ ಎಂದು ಅವರು ತಿಳಿಸಿದರು.
ಈ ವಿಶೇಷ ಮಕ್ಕಳ ಉದ್ಯಾನವನವನ್ನು ರಕ್ಷಿಸಿ, ಆ ಮಕ್ಕಳಿಗಾಗಿಯೇ ಉಪಯೋಗವಾಗುವಂತೆ ನೋಡಿಕೊಳ್ಳುವುದು ಇಲ್ಲಿಗೆ ಬರುವ ಹಿರಿಯರ ಕರ್ತವ್ಯ. ಈ ಉದ್ಯಾನವನವನ್ನು ದುರುಪಯೋಗವಾಗದಂತೆ ತಡೆಯುವುದು ನಾಗರಿಕರ ಕೈಯಲ್ಲಿಯೇ ಇದೆ ಎಂದು ಸಚಿವರು ಹೇಳಿದರು. ಯುವಕರಿಗಾಗಿ ಜಿಮ್
ಇದೇ ಸಂದರ್ಭದಲ್ಲಿ ಇದೇ ಉದ್ಯಾನವನದ ಆವರಣದಲ್ಲಿ ಈ ಪ್ರದೇಶದ ಯುವಕರ ಬಹುದಿನದ ಬೇಡಿಕೆಯಾಗಿದ್ದ ಆಧುನಿಕ ಜಿಮ್ ಕೇಂದ್ರವನ್ನು ಸಹ ಸಚಿವ ಸುರೇಶ್ಕುಮಾರ್ ಉದ್ಘಾಟಿಸಿದರು.
ಈ ಜಿಮ್ ಕೆಂದ್ರದಲ್ಲಿ ಆಧುನಿಕ ಜಿಮ್ ಉಪಕರಣಗಳನ್ನು ಸುಮಾರು ರೂ.5 ಲಕ್ಷ ವೆಚ್ಚದಲ್ಲಿ ಅಳವಡಿಸಲಾಗಿದೆ. ಜಿಮ್ ಕೇಂದ್ರ ಉದ್ಘಾಟಿಸಿದ ಸಚಿವ ಸುರೇಶ್ಕುಮಾರ್ ಈ ಜಿಮ್ ಕೇಂದ್ರದಿಂದ ಯುವಕರ ಶಾರೀರಿಕ ಆರೋಗ್ಯ ಉತ್ತಮಗೊಳ್ಳುವುದರ ಜೊತೆಗೆ ಸಮಾಜದ ಆರೋಗ್ಯವೂ ಉತ್ತಮಗೊಳ್ಳಲು ಪೂರಕವಾಗಲಿ ಎಂದು ಹಾರೈಸಿದರು. ಈಗ ಮೊದಲನೇ ಕಂತಾಗಿ ಕೆಲವು ಜಿಮ್ ಉಪಕರಣಗಳನ್ನು ಅಳವಡಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯವನ್ನು ಅಳವಡಿಸಲಾಗುವುದು ಎಂದು ಅವರು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications