ಆಡ್ವಾಣಿ ಆಪ್ತ ಸುಧೀಂದ್ರ ಟಿಎಂಸಿ ತೆಕ್ಕೆಗೆ ?
ನವದೆಹಲಿ, ಆ. 27 : ಸೈದ್ಧಾಂತಿಕ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಇತ್ತೀಚೆಗೆ ಬಿಜೆಪಿ ತೊರೆದಿದ್ದ ಆಡ್ವಾಣಿ ಅವರ ಆಪ್ತ ಎನ್ನಲಾದ ಕರ್ನಾಟಕದ ಮೂಲದ ಸುಧೀಂದ್ರ ಕುಲಕರ್ಣಿ ಸದ್ದಿಲ್ಲದೆ ರೈಲ್ವೆ ಸಚಿವಾಲಯದ ಮುಖ್ಯ ಸಮಿತಿ ಸೇರಿಕೊಂಡಿದ್ದಾರೆ. ಸ್ವತಃ ರೈಲ್ವೆ ಸಚಿವೆ ಮಮತಾ ಬ್ಯಾನರ್ಜಿ ಅವರು ತಿಂಗಳ ಹಿಂದೆಯೇ ಈ ನೇಮಕ ಮಾಡಿದ್ದಾರೆ.
ಎಫ್ ಐಸಿಸಿಐ ಪ್ರಧಾನ ಕಾರ್ಯದರ್ಶಿ ಅಮಿತ್ ಮಿಶ್ರಾ ನೇತೃತ್ವದ ಸಮಿತಿಗೆ ನೇಮಕಗೊಂಡಿದ್ದೇನೆ. ಇದು ವಾಜಪೇಯಿ ಪ್ರಧಾನಿಯಾಗಿದ್ದಾಗ ರೇಲ್ವೆ ಮಂತ್ರಿಯಾಗಿದ್ದ ಮಮತಾ ಬ್ಯಾನರ್ಜಿ ಅವರೊಂದಿಗಿನ ಸೌಹಾರ್ದದ ಫಲವೇ ಹೊರತು ತೃಣಮೂಲ ಕಾಂಗ್ರೆಸ್ ತಾವು ಸೇರುತ್ತಿಲ್ಲ ಎಂದು ಕುಲಕರ್ಣಿ ಸ್ಪಷ್ಟಪಡಿಸಿದ್ದಾರೆ.
ರೈಲ್ವೆಯ ಅಧುನೀಕರಣ ಹಾಗೂ ವಿಸ್ತರಣೆಗಾಗಿ ಹೊಸ ಯೋಜನೆಗಳ ಜಾರಿ ಮತ್ತು ಹಣಕಾಸು ನೆರವು ಸಂಗ್ರಹ ಕುರಿತು ರೈಲ್ವೆ ಸಚಿವಾಲಯಕ್ಕೆ ಶಿಫಾರಸ್ಸುಗಳನ್ನು ಮಾಡುವ ಜವಾಬ್ದಾರಿ ಸುಧೀಂದ್ರ ಅವರನ್ನೊಳಗೊಂಡ ಸಮಿತಿಗೆ ಇದೆ. ಅಲ್ಲದೇ ಖಾಸಗಿ ಹೂಡಿಕೆ ಆಕರ್ಷಿಸುವ ಕುರಿತು ಸಲಹೆಗಳನ್ನು ನೀಡುವ ಹೊಣೆಯೂ ಇದೆ. ಈ ನಡುವೆ ಸುಧೀಂದ್ರ ಅವರು ತೃಣಮೂಲ ಕಾಂಗ್ರೆಸ್ ಸೇರುತ್ತಿದ್ದಾರೆ ಎಂದು ಅಂಶವೂ ಬಲವಾಗಿ ಕೇಳಿ ಬರತೊಡಗಿದೆ.
(ಏಜನ್ಸೀಸ್)
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications