ಆಡ್ವಾಣಿ ರಥಯಾತ್ರೆ ಮುಂದಕ್ಕೆ
ನವದೆಹಲಿ,
ಆ. 28 : ಸದ್ಯಕ್ಕೆ ಪಕ್ಷದೊಳಗಿನ ಆಂತರಿಕ ಬಿಕ್ಕಟ್ಟು ಶಮನಗೊಳ್ಳುವ ಯಾವ ಲಕ್ಷಣಗಳೂ ಕಾಣಿಸಿಕೊಳ್ಳದೇ ಇರುವುದರಿಂದ ಬಿಜೆಪಿ ನಾಯಕ ಎಲ್ ಕೆ ಆಡ್ವಾಣಿ, ಸೆಪ್ಟೆಂಬರ್ ತಿಂಗಳಲ್ಲಿ ಹಮ್ಮಿಕೊಂಡಿದ್ದ ತಮ್ಮ ರಥಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಿದ್ದಾರೆ. id="toptextpromo">1990ರಲ್ಲಿ
ರಥಯಾತ್ರೆಯ ಮೂಲಕವೇ ಭಾರಿ ಜನಪ್ರಿಯಗೊಂಡಿದ್ದ ಆಡ್ವಾಣಿ, ಇತ್ತೀಚಿನ ಲೋಕಸಭಾ ಚುನಾವಣೆಯಲ್ಲಿನ ಸೋಲು ಮತ್ತು ಮೂರು ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣಾ ಸಮೀಪಿಸುತ್ತಿರುವುದರಿಂದ ಪಕ್ಷ ಬಲವರ್ಧನೆಗೆ ಮತ್ತು ಕಾರ್ಯಕರ್ತರನ್ನು ಒಗ್ಗೂಡಿಸಲು ರಾಷ್ಟ್ರಾದ್ಯಂತ ರಥಯಾತ್ರೆ ಹಮ್ಮಿಕೊಂಡಿದ್ದರು. ಅಕ್ಟೋಬರ್ ನಲ್ಲಿ ನಡೆಯುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮುನ್ನ ಈ ಯಾತ್ರೆ ಆಯೋಜಿಸಿದ್ದೆವು ಮತ್ತು ತಾತ್ಕಾಲಿಕವಾಗಿ ರಥಯಾತ್ರೆಯನ್ನು ಮುಂದೂಡುತ್ತಿದ್ದೇವೆ ಎಂದು ಪಕ್ಷದ ಹಿರಿಯ ವಕ್ತಾರ ಮಾಧ್ಯಮಗಳಿಗೆ ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ಏಜನ್ಸೀಸ್)












Click it and Unblock the Notifications