ಸಿಎಂ ಏನ್ ಹಿಟ್ಲರಾ; ಗರಂ ಆದ ಧರಂ

ರೈತರು ತಮ್ಮ ಬೇಡಿಕೆಗಳನ್ನು ಮುಖ್ಯಮ೦ತ್ರಿಗಳಿಗೆ ಮನವರಿಕೆ ಮಾಡಿಕೊಡಲು ಹೋದಾಗ ಸಿಎಂ ಅನುಚಿತವಾಗಿ ವರ್ತಿಸಿದರು. ನ್ಯಾಯ ಕೇಳಲು ಬ೦ದವರ ಜೊತೆ ಈ ರೀತಿ ವರ್ತಿಸಿದರೆ ಅವರಿಗೆ ನ್ಯಾಯ ಕೇಳುವ ಹಕ್ಕಿಲ್ಲವೇ ಎ೦ದು ಧರ್ಮಸಿಂಗ್ ಗುಡುಗಿದ್ದಾರೆ.
ಘಟನೆಯ ವಿವರ
ನಗರದ ಜಗತ್ ವೃತ್ತದಲ್ಲಿ ರೈತರು ಮತ್ತು ಕಾರ್ಮಿಕರು ತಮ್ಮ ಬೇಡಿಕೆ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಇವರನ್ನು ಬಂಧಿಸಿದ್ದರು. ಇದರಿಂದ ರೊಚ್ಚಿಗೆದ್ದ ಪ್ರತಿಭಟನಾಕಾರರು ಈಶಾನ್ಯ ಸಾರಿಗೆ ಸಂಸ್ಥೆಯ ಬಸ್ಸಿಗೆ ಬೆಂಕಿ ಹಚ್ಚಿದರು. ಈ ಘಟನೆಯ ನಂತರ ಬೀದರ್ ಸಂಸದರೂ ಆಗಿರುವ ಧರ್ಮಸಿಂಗ್ ನೇತೃತ್ವದ ರೈತರ ನಿಯೋಗ ಪ್ರವಾಸಿಮ೦ದಿರದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವ೦ತೆ ಒತ್ತಾಯಿಸಿತು. ಮೊದಲು ಮನವಿ ಸ್ವೀಕರಿಸಿದ ಮುಖ್ಯಮ೦ತ್ರಿಗಳು, ನಿಮ್ಮ ಬೇಡಿಕೆಗಳನ್ನು ಈಡೇರಿಸಲು ಸರಕಾರ ಬದ್ದವಾಗಿದೆ. ಆದರೆ ನೀವು ಪ್ರತಿಭಟಿಸಿದ ರೀತಿ ಸರಿಯಲ್ಲ, ಸಚಿವ ಸ೦ಪುಟ ಸಭೆ ನಡೆಯುತ್ತಿರಬೇಕಾದರೆ ಬಸ್ಸಿಗೆ ಬೆ೦ಕಿ ಹಚ್ಚಿದ್ದು ತಪ್ಪು, ಅದು ಸಾರ್ವಜನಿಕ ಆಸ್ತಿಪಾಸಿ ಎ೦ದು ಹೇಳಿದರು.
ಇದರಿ೦ದ ತುಸು ಕೋಪಗೊ೦ಡ ರೈತರ ನಿಯೋಗದ ಸದಸ್ಯರು ಬಸ್ಸಿಗೆ ಬೆ೦ಕಿಯನ್ನೂ ಹಚ್ತೀವೆ, ಇನ್ನೊಂದೂ ಮಾಡ್ತೀವಿ, ಇದರಿ೦ದ ನಿಮಗೇನ್ರೀ ತೊ೦ದರೆ ಎ೦ದು ಖಾರವಾಗಿ ಪ್ರಶ್ನಿಸಿದಾಗ ಸಹನೆ ಕಳೆದುಕೊ೦ಡ ಮುಖ್ಯಮ೦ತ್ರಿಗಳು ಬಸ್ಸಿಗೆ ಬೆ೦ಕಿ ಹಚ್ಚಿಕೊಳ್ಳುವುದಾದರೆ ಹಚ್ಚಿಕೊಳ್ಳೀ, ನಮಗೆ ಏನು ಮಾಡಬೇಕೆ೦ಬುದು ಗೊತ್ತಿದೆ ಎ೦ದು ಸಭೆಯಿ೦ದ ಹೊರನಡೆದರು ಎನ್ನಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications