ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ
ಬೆಂಗಳೂರು, ಆ, 29 : ಗಣೇಶ ವಿಸರ್ಜನೆ ಮೆರವಣಿಗೆಯಲ್ಲಿದ್ದ ಇಬ್ಬರು ಯುವಕರ ಮೇಲೆ ನಾಲ್ವರು ದುಷ್ಕರ್ಮಿಗಳ ತಂಡವೊಂದು ನಡೆಸಿದ ದಾಳಿಯಲ್ಲಿ ಯುವಕನೊಬ್ಬ ಮೃತಪಟ್ಟು, ಮತ್ತೊಬ್ಬ ಯುವಕ ತೀವ್ರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ನಡೆದಿದೆ. ಮುಂಜಾಗ್ರತಾ ಕ್ರಮವಾಗಿ ನಗರದ ಪೂರ್ವ ವಿಭಾಗದ ಕೆಲ ಭಾಗಗಳಲ್ಲಿ ಆಗಸ್ಟ್ 30ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಸಂಪಿಗೆಹಳ್ಳಿಯ ಕ್ರಿಸ್ಟೋಫರ್ (22) ಅಲಿಯಾಸ್ ವಿನೀತ್ ಎಂಬಾತ ಮೃತಪಟ್ಟಿದ್ದರೆ, ಆತನ ಸ್ನೇಹಿತ ನಾಗಾವರದ ವಿಕ್ರಮ್ (22) ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಾಗಾವರ, ಬಾಣಸವಾಡಿ, ಹೆಣ್ಣೂರು, ಡಿ ಜಿ ಹಳ್ಳಿ, ಕೆ ಜಿ ಹಳ್ಳಿ ಮತ್ತಿತರ ಕಡೆಗಳಲ್ಲಿ ಕೂರಿಸಿದ್ದ ಗಣೇಶಮೂರ್ತಿಗಳನ್ನು ವಿಸರ್ಜನೆ ಕಾರ್ಯಕ್ರಮಗಳಲ್ಲಿ ನೂರಾರು ಗಣೇಶ ವಿಗ್ರಹಗಳನ್ನು ವಾಹನಗಳಲ್ಲಿ ಮೆರವಣಿಗೆ ಮೂಲಕ ಹಲಸೂರು ಕೆರೆಗೆ ಗುರುವಾರ ತೆರಲಾಗುತ್ತಿತ್ತು. ಕೆಜಿಹಳ್ಳಿ ಠಾಣೆ ವ್ಯಾಪ್ತಿಯ ಟ್ಯಾನರಿ ರಸ್ತೆ ಪೆರಿಯಾರ್ ವೃತ್ತಕ್ಕೆ ಸಂಜೆ 6.30ರ ಸಮಾರಿಗೆ ಮೆರವಣಿಗೆ ಬರುತ್ತಿದ್ದಂತೆಯೇ ಘೋಷಣೆಗಳು ಹೆಚ್ಚಾದವು. ಈ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಸಾಗುತ್ತಿದ್ದವರ ಮೇಲೆ ಕಲ್ಲು ತೂರಾಟ ನಡೆಯಿತು. ಇದರಿಂದ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು.
ಎರಡು ಗುಂಪುಗಳ ನಡುವೆ ಮತ್ತಷ್ಟು ಘರ್ಷಣೆಗಳು ಆಗಬಹುದೆಂದು ಅರಿತ ಪೊಲೀಸರು ತಕ್ಷಣ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು, ಮೆರವಣಿಗೆ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು. ಆದರೆ, ಟ್ಯಾನರಿ ರಸ್ತೆಯಲ್ಲಿ ಶುಕ್ರವಾರವೂ ಉದ್ವಗ್ನ ಸ್ಥಿತಿ ನಿರ್ಮಾಣವಾಗಿರುವುದನ್ನು ತಿಳಿದು ಕೆಜಿಹಳ್ಳಿ, ಬಾಣಸವಾಡಿ, ಹೆಣ್ಣೂರು, ಫ್ರೇಜರ್ ಟೌನ್, ಅಮೃತಹಳ್ಳಿ ಹಾಗೂ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಆಗಸ್ಟ್ 27 ರಿಂದ 30ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
(ದಟ್ಸ್ ಕನ್ನಡ ವಾರ್ತೆ)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications