ಚಿತ್ತಾಪುರದಲ್ಲಿ ಸಿಡಿದೆದ್ದ ನಾಗಾವಿ ಯಲ್ಮಮ್ಮ ಭಕ್ತರು
ಗುಲಬರ್ಗಾ, ಆ. 30 : ಚಿತ್ತಾಪುರದಲ್ಲಿ ಗುಲಬರ್ಗಾ ಜಿಲ್ಲಾಧಿಕಾರಿ ಡಿಸಿ ಸತ್ಯಮೂರ್ತಿ ಮೇಲ್ವಿಚಾರಣೆಯಲ್ಲಿ ನಾಗಾವಿ ಯಲ್ಲಮ್ಮ ದೇವಸ್ಥಾನದಲ್ಲಿ ಅಹೋರಾತ್ರಿ ಹೋಮ ನಡೆದಿರುವುದು ಸ್ಥಳೀಯರ ಕಣ್ಣು ಕೆಂಪಾಗುವಂತೆ ಮಾಡಿದೆ.
ಚಿತ್ತಾಪುರ ಕ್ಷೇತ್ರದಲ್ಲಿ ಹೊಸದಾಗಿ ಆಯ್ಕೆಯಾಗಿರುವ ವಿಧಾನಸಭಾ ಸದಸ್ಯ ವಾಲ್ಮಿಕಿ ನಾಯಕ್ ಮತ್ತಿತರ ಗಣ್ಯರ ಸಮ್ಮುಖದಲ್ಲಿ ಪೂಜೆ, ಹೋಮ ನಡೆದಿರುವುದು ಜನರ ಧಾರ್ಮಿಕ ಮನೋಭಾವನ್ನು ಕೆರಳಿಸಿದೆ. ಯಲ್ಮಮ್ಮ ದೇವರನ್ನು ಬದಲಾಯಿಸಲು ಕೆಲವರು ಹುನ್ನಾರ ನಡೆಸಿದ್ದಾರೆ, ಜನರ ಭಾವನೆಗಳಿಗೆ ಘಾಸಿ ಉಂಟು ಮಾಡಿದ್ದಾರೆ ಎಂದು ಭಕ್ತಾದಿಗಳು ಭಾನುವಾರ ಪ್ರತಿಭಟನೆ ನಡೆಸಿದರು.
ಭಕ್ತರ ಭಾವನೆಯನ್ನು ಕೆರಳಿಸಿದ ಜಿಲ್ಲಾಧಿಕಾರಿ ಡಿಸಿ ಸತ್ಯಮೂರ್ತಿ ಅವರ ವಿರುದ್ಧ ಕೂಡಲೆ ಕ್ರಮ ಕೈಗೊಳ್ಳಬೇಕು ಮತ್ತು ದೇವಸ್ಥಾನದಲ್ಲಿ ಯಾವುದೇ ಬದಲಾವಣೆ ಸಂಭವಿಸದಂತೆ ಸರಕಾರ ಕಾರ್ಯತತ್ಪರವಾಗಬೇಕು ಎಂದು ಪ್ರತಿಭಟನಾಕಾರರು ಬೇಡಿಕೆಯನ್ನಿಟ್ಟಿದ್ದಾರೆ.
ತಲತಲಾಂತರದಿಂದ ಲಿಂಗಾಯತ ಕೋಮಿನವರು ದೇವಸ್ಥಾನದಲ್ಲಿ ಪೂಜೆ ಸಲ್ಲಿಸುತ್ತ ಬಂದಿದ್ದಾರೆ. ಸಂಜೆ 6 ಗಂಟೆಯ ನಂತರ ದೇವಸ್ಥಾನದಲ್ಲಿ ಪೂಜೆ ನಡೆಯುವುದಿಲ್ಲ. ಆದರೆ, ಶನಿವಾರ ಸಂಜೆ ಆರು ಗಂಟೆಯ ನಂತರ 11 ಜನ ಅರ್ಚಕರು ಸೇರಿದಂತೆ ಕೆಲ ಪುಢಾರಿಗಳು ದೇವಸ್ಥಾನ ಪ್ರವೇಶಿಸಿ ಹೋಮ ನಡೆಸಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ದೇವಸ್ಥಾನಕ್ಕೆ ಧಾವಿಸಿದ ಭಕ್ತರು ಹೋಮದಲ್ಲಿ ತೊಡಗಿದ್ದ ಅರ್ಚಕರಿಗೆ ಧರ್ಮದೇಟು ನೀಡಿದ್ದಾರೆ.
ಚಿತ್ತಾಪುರ ಬಂದ್ ಗೆ ಕರೆ : ಯಲ್ಲಮ್ಮ ದೇವರನ್ನು ಬದಲಾಯಿಸುಲು ನಡೆಸಿದ ಹುನ್ನಾರವನ್ನು ವಿರೋಧಿಸಿ ಪ್ರತಿಭಟನಾಕಾರರು ಸೋಮವಾರ ಚಿತ್ತಾಪುರ ಬಂದ್ ಗೆ ಕರೆ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications