ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಚೀನಾ ಪ್ರವಾಸ; ಸಿದ್ದು ಲೇವಡಿ

By Staff
|
Google Oneindia Kannada News

Siddaramaiah
ಬೆಂಗಳೂರು, ಆ. 31: ಬರಪೀಡಿತ ಜಿಲ್ಲೆಗಳಿಗೆ ಮುಖ್ಯಮಂತ್ರಿಗಳು ಮೊದಲು ಭೇಟಿ ನೀಡಲಿ. ಬರ ಪರಿಸ್ಥಿತಿ ನಿರ್ವಹಣೆ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಂಡಿಲ್ಲ. ಉಪಸಮಿತಿ ರಚನೆಯಾಗಿಲ್ಲ, ಹೊಟ್ಟೆಪಾಡಿಗೆ ಜನ ಗುಳೆ ಹೋಗುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ವಿದೇಶ ಪ್ರವಾಸ ಕೈಗೊಳ್ಳುತ್ತಿರುವುದು ಹಾಸ್ಯಾಸ್ಪದ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಕಾರವನ್ನು ಲೇವಡಿ ಮಾಡಿದ್ದಾರೆ.

ರಾಜ್ಯದಲ್ಲಿ ಬರ ಪರಿಸ್ಥಿತಿ ತಾಂಡವವಾಡುತ್ತಿದ್ದು ಮಾರಕ ರೋಗಗಳಿಂದ ಜನ ತತ್ತರಿಸುತ್ತಿದ್ದಾರೆ. 96 ತಾಲೂಕುಗಳಲ್ಲಿ ಬರದಿಂದ ಜನ ತತ್ತರಿಸಿ ಗುಳೆ ಹೋಗುತ್ತಿದ್ದಾರೆ. ಆರೋಗ್ಯ ಪರಿಸ್ಥಿತಿ ವಿಷಮಿಸಿದೆ. ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದರು.

ಹಂದಿಜ್ವರ, ಡೆಂಗ್ಯೂಜ್ವರ, ಚಿಕೂನ್ ಗುನ್ಯಾದಂತಹ ರೋಗಗಳು ನಿಯಂತ್ರಣಕ್ಕೆ ಬಂದಿಲ್ಲ, ಈ ರೋಗದ ಬಗ್ಗೆ ಹೆಚ್ಚಿಗೆ ಹೇಳಿಕೆ ನೀಡಿದರೆ ಸರಕಾರದ ಕೆಲ ಸಚಿವರುಗಳು ನನ್ನ ಮೇಲೆ ಶಾಪಹಾಕ್ತಾರೆ. ಜನರಿಂದ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿಗಳು ಚೀನಾ ಪ್ರವಾಸ ಕೈಗೊಳ್ಳುತ್ತಿರಬೇಕೆಂದು ಸಿದ್ದು ವ್ಯಂಗ್ಯವಾಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X