ಚಿತ್ರದುರ್ಗ : ಶಿವಮೂರ್ತಿ ಶರಣರ ಗ್ರಾಮ ವಾಸ್ತವ್ಯ

Shivamurthy Swamiji
ಚಿತ್ರದುರ್ಗ, ಆ. 31 : ಬಸವ ಕೇಂದ್ರದ ಮುರುಘಾಮಠದ ಡಾ ಶಿವಮೂರ್ತಿ ಸ್ವಾಮೀಜಿ ಮಂಗಳವಾರದಿಂದ ಹಳ್ಳಿಗಳಲ್ಲಿ ಗ್ರಾಮ ವಾಸ್ತವ್ಯ ಮಾಡುವ ಮೂಲಕ ಗ್ರಾಮೀಣ ಜನರ ಕೈಂಕರ್ಯ ಮುಂದಾಗಿದ್ದಾರೆ. ಇಂದು ರಾತ್ರಿ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಪಿಡಿ ಕೋಟೆಯಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಮಠಾಧೀಶರೊಬ್ಬರು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗ್ರಾಮ ವಾಸ್ತವ್ಯ ಕೈಗೊಂಡ ಹಿರಿಮೆ ಚಿತ್ರದುರ್ಗ ಶ್ರೀಗಳಿಗೆ ಸಲ್ಲಿದಂತಾಗುತ್ತದೆ.

ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಖುದ್ದಾಗಿ ಭೇಟಿ ನೀಡಿ ಅರ್ಥೈಸಿಕೊಳ್ಳುವ ಉದ್ದೇಶದಿಂದ ರಾತ್ರಿ ವೇಳೆ ಗ್ರಾಮಗಳಲ್ಲಿಯೇ ಅರಿವು ಮೂಡಿಸುವ ಕೆಲಸಕ್ಕೆ ಹೊರಟಿದ್ದಾರೆ. ಹಳ್ಳಿಗಳಲ್ಲಿ ಜೀವಂತವಾಗಿರುವ ಜಾತಿ ವ್ಯವಸ್ಥೆ ಬಗ್ಗೆ ಅರಿವು ಮೂಡಿಸಿ ಸಮಾನತೆ ತರುವುದರೊಂದಿಗೆ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡಲಿದ್ದಾರೆ. ಗ್ರಾಮಗಳಲ್ಲಿನ ಮೂಲ ಸೌಕರ್ಯದ ಬಗ್ಗೆಯೂ ಅರಿವು ಮೂಡಿಸಲಿದ್ದಾರೆ. ಹಾಗೂ ಇದರೊಂದಿಗೆ ಸಸಿ ನೆಡುವ ಕಾರ್ಯಕ್ರಮವೂ ನಡೆಯಲಿದೆ.

ಪ್ರಥಮವಾಗಿ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಗಡಿಗ್ರಾಮ ಪಿಡಿ ಕೋಟೆಯಲ್ಲಿ ಇಂದು ರಾತ್ರಿ ಉಳಿದುಕೊಳ್ಳುವ ಮೂಲಕ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿ ಜಿಪಂ ಮಾಜಿ ಅಧ್ಯಕ್ಷ ರಘುನಾಥ್, ಮಹೇಶ್ ಉಪಸ್ಥಿತರಿರುವರು.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+