ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಚಿತ್ರದುರ್ಗ : ಶಿವಮೂರ್ತಿ ಶರಣರ ಗ್ರಾಮ ವಾಸ್ತವ್ಯ
ಗ್ರಾಮಗಳಲ್ಲಿರುವ ಸಮಸ್ಯೆಗಳನ್ನು ಖುದ್ದಾಗಿ ಭೇಟಿ ನೀಡಿ ಅರ್ಥೈಸಿಕೊಳ್ಳುವ ಉದ್ದೇಶದಿಂದ ರಾತ್ರಿ ವೇಳೆ ಗ್ರಾಮಗಳಲ್ಲಿಯೇ ಅರಿವು ಮೂಡಿಸುವ ಕೆಲಸಕ್ಕೆ ಹೊರಟಿದ್ದಾರೆ. ಹಳ್ಳಿಗಳಲ್ಲಿ ಜೀವಂತವಾಗಿರುವ ಜಾತಿ ವ್ಯವಸ್ಥೆ ಬಗ್ಗೆ ಅರಿವು ಮೂಡಿಸಿ ಸಮಾನತೆ ತರುವುದರೊಂದಿಗೆ ಸಮಸ್ಯೆ ನಿವಾರಣೆಗೆ ಪ್ರಯತ್ನ ಮಾಡಲಿದ್ದಾರೆ. ಗ್ರಾಮಗಳಲ್ಲಿನ ಮೂಲ ಸೌಕರ್ಯದ ಬಗ್ಗೆಯೂ ಅರಿವು ಮೂಡಿಸಲಿದ್ದಾರೆ. ಹಾಗೂ ಇದರೊಂದಿಗೆ ಸಸಿ ನೆಡುವ ಕಾರ್ಯಕ್ರಮವೂ ನಡೆಯಲಿದೆ.
ಪ್ರಥಮವಾಗಿ ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಗಡಿಗ್ರಾಮ ಪಿಡಿ ಕೋಟೆಯಲ್ಲಿ ಇಂದು ರಾತ್ರಿ ಉಳಿದುಕೊಳ್ಳುವ ಮೂಲಕ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿ ಜಿಪಂ ಮಾಜಿ ಅಧ್ಯಕ್ಷ ರಘುನಾಥ್, ಮಹೇಶ್ ಉಪಸ್ಥಿತರಿರುವರು.
(ದಟ್ಸ್ ಕನ್ನಡ ವಾರ್ತೆ)
Story first published: Monday, August 31, 2009, 15:15 [IST]