ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶಿವಮೊಗ್ಗ : 21 ಕೋಟಿ ರೂ. ನೆರೆ ಪರಿಹಾರಕ್ಕೆ ಮನವಿ
ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ಆದ ನಷ್ಟದ ವಿವರವನ್ನು ನೀಡಿದ ಜಿಲ್ಲಾಧಿಕಾರಿಗಳು ಪರಿಹಾರಕ್ಕೆ ಮನವಿ ಮಾಡಿದರು. ಜಿಲ್ಲೆಯಲ್ಲಿ ಮಳೆ ಮತ್ತು ನೆರೆಯಿಂದ ಸುಮಾರು 2000 ಎಕರೆ ತೋಟದ ಬೆಳೆ ನಷ್ಟವಾಗಿದೆ. ಹಾಗೆಯೇ 18403 ಎಕರೆ ಕೃಷಿ ಭೂಮಿಯ ಬೆಳೆ ಹಾಳಾಗಿದೆ. ಮಳೆಯಿಂದ ಸುಮಾರು 7 ಜನರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿವರಿಸಿದರು. ತಂಡವು ಸಾಗರ, ತೀರ್ಥಹಳ್ಳಿ ಮತ್ತು ಹೊಸನಗರ ತಾಲ್ಲೂಕುಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.
ದೆಹಲಿಯ ಆರ್ಥಿಕ ಮಂತ್ರಾಲಯದ ಜಂಟಿ ನಿರ್ದೇಶಕ ಆರ್.ಕೆ. ರೈ ನೇತೃತ್ವದಲ್ಲಿ ಅಧಿಕಾರಿಗಳಾದ ಮನೋಹರ್ ಮತ್ತು ಕೆ.ಎಸ್. ಜಾಕೋ ಈ ತಂಡದಲ್ಲಿದ್ದು, ಪರಿಶೀಲನೆ ನಡೆಸಿ ಜಿಲ್ಲಾಧಿಕಾರಿಗಳಿಂದ ಮನವಿ ಪಡೆದರು. ಸಭೆಯಲ್ಲಿ ಗ್ರಾಮಾಂತರ ಶಾಸಕ ಕೆ.ಜಿ. ಕುಮಾರಸ್ವಾಮಿ, ಜಿ.ಪಂ. ಅಧ್ಯಕ್ಷ ಹೆಚ್.ಸಿ. ಬಸವರಾಜಪ್ಪ, ಸ್ಥಾನಿಕ ಅಧಿಕಾರಿ ನಿರ್ವಾಣಪ್ಪ, ನಗರಸಭಾ ಅಧ್ಯಕ್ಷ ಎನ್.ಜೆ. ರಾಜಶೇಖರ್ ಸೇರಿದಂತೆ ಹಲವರು ಹಾಜರಿದ್ದರು.
Comments
Story first published: Tuesday, September 1, 2009, 17:40 [IST]