ಸಿಎಂ ಸಿಕ್ಕರೆ ಪೊಲೀಸರಿಗೆ ದೂರು ನೀಡಿ : ರೋಸಯ್ಯ,

ರಾಜಶೇಖರರೆಡ್ಡಿ ಕಣ್ಮರೆಯಾಗಿರುವುದು ಸೋನಿಯಾ ಗಾಂಧಿ, ಮನಮೋಹನ್ ಸಿಂಗ್, ಪಿ ಚಿದಂಬರಂ ಅವರು ಸತತ ಸಂಪರ್ಕದಲ್ಲಿದ್ದಾರೆ. ಮುಖ್ಯಮಂತ್ರಿಗಳ ಹೆಲಿಕ್ಯಾಪ್ಟರ್ ಸಿಕ್ಕಲ್ಲಿ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡಿ ಎಂದು ಆಂಧ್ರಪ್ರದೇಶದ ಹಣಕಾಸು ಸಚಿವ ಕೆ ರೋಸಯ್ಯ ಪತ್ರಿಕಾಗೋಷ್ಠಿ ನಡೆಸಿ ಮನವಿ ಮಾಡಿಕೊಂಡಿದ್ದಾರೆ. 4 ಗಂಟೆ ಆಗಿದ್ದರೂ ಸಿಎಂ ಪತ್ತೆ ಇಲ್ಲ. ಇದರಿಂದ ನಮಗೆ ತೀವ್ರ ಆತಂಕವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ರಾಜಶೇಖರರೆಡ್ಡಿ ಹೆಲಿಕ್ಯಾಪ್ಟರ್ ಶೋಧ ಕಾರ್ಯಕ್ಕೆ ಸುಮಾರು 10 ಹೆಲಿಕ್ಯಾಪ್ಟರ್ ಗಳು ಕಾರ್ಯಾರಂಭಿಸಿವೆ. ಸಿಎಂ ಕಣ್ಮರೆಯಾಗಿ 5 ಗಂಟೆ ಕಳೆದ ನಂತರ ಕೇಂದ್ರ ಸರಕಾರ ಎಚ್ಚೆತ್ತುಕೊಂಡಿರುವುದು ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಕೂಡಾ ನಲ್ಲಮಲ್ಲ ಅರಣ್ಯ ಪ್ರದೇಶದಲ್ಲಿ ಮುಖ್ಯಮಂತ್ರಿಗಳ ಹೆಲಿಕ್ಯಾಪ್ಟರ್ ಹುಡುಕಾಟ ಆರಂಭಿಸಿದ್ದಾರೆ.
(ಏಜನ್ಸೀಸ್)












Click it and Unblock the Notifications