ಹಂಗಾಮಿ ಮುಖ್ಯಮಂತ್ರಿಯಾಗಿ ರೋಸಯ್ಯ

ಮುಂದಿನ ಎರಡು ಮೂರು ದಿನಗಳಲ್ಲಿ ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಈ ಮೇರೆಗೆ ಇಂದು ಸಂಜೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಆಂಧ್ರದಲ್ಲಿ ಶೋಕಾಚರಣೆ ಆಚರಿಸಲಾಗುತ್ತಿದ್ದು ಎರಡು ದಿನಗಳ ರಜೆಯನ್ನು ಘೋಷಿಸಲಾಗಿದೆ.
ಕಾಡಿನಲ್ಲಿ ದಾರಿತಪ್ಪಿದ ವರದಿಗಾರರು
ಹೆಲಿಕಾಪ್ಟರ್ ದುರಂತ ಸ್ಥಳವನ್ನು ಪತ್ತೆ ಹಚ್ಚಲು ಹೊರಟ ಕೆಲವರು ನಲ್ಲಮುಲ್ಲ ಕಾಡಿನಲ್ಲಿ ದಾರಿ ತಪ್ಪ್ಪಿದ್ದಾರೆ. ರುದ್ರಕೋಟೆ ಬಳಿಯ ಪಸರುಟ್ರ ಅರಣ್ಯ ಪ್ರದೇಶದಲ್ಲಿ ವರದಿಗಾರರು, ಪೊಲೀಸರು ದಾರಿ ತಪ್ಪಿರುವುದಾಗಿ ಆಂಧ್ರಪ್ರದೇಶದ ಮಾಧ್ಯಮಗಳು ಪ್ರಕಟಿಸಿವೆ.
ಸಚಿವ ಸಂಪುಟ ಸಭೆ ಆರಂಭ
ಹೈದರಾಬಾದ್ ನಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ. ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಹಠಾತ್ ಮರಣಾನಂತರ ಪರಿಸ್ಥಿತಿಗಳನ್ನು ಸಮೀಕ್ಷಿಸುತ್ತಿದ್ದು , ಮುಂದಿನ ಕ್ರಮಗಳ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚಿಸಲಿದ್ದಾರೆ.
ಮಧ್ಯಾಹ್ನಕ್ಕೆ ಪ್ರಧಾನಿ ಆಗಮನ
ಪ್ರಧಾನಿ ಮನಮೋಹನ್ ಸಿಂಗ್ ಅವರೊಂದಿಗೆ ಸೋನಿಯಾಗಾಂಧಿ ಸಹ ಇಂದು ಮಧ್ಯಾಹ್ನ ಮೂರು ಗಂಟೆಗೆ ಹೈದರಾಬಾದ್ ಗೆ ಆಗಮಿಸಲಿದ್ದಾರೆ. ಶೋಕಾಚರಣೆ ನಿಮಿತ್ತ ತಮಿಳುನಾಡು ಮತ್ತು ಪಾಂಡಿಚೇರಿ ಸರಕಾರಗಳು ಸೆಪ್ಟೆಂಬರ್ 4ರಂದು ರಜೆ ಘೋಷಿಸಿವೆ.
ವೈಎಸ್ಆರ್ ಮೃತ ದೇಹ ಕರ್ನೂಲಿಗೆ
ಹೆಲಿಕಾಪ್ಟರ್ ದುರಂತದಲ್ಲಿ ಸಾವಪ್ಪಿದ ವೈ ಎಸ್ ರಾಜಶೇಖರ ರೆಡ್ಡಿ ಮೃತ ದೇಹವನ್ನು ಕರ್ನೂಲಿಗೆ ಸ್ಥಳಾಂತರಿಸುವ ಪ್ರಯತ್ನಗಳು ಚುರುಕುಗೊಂಡಿವೆ. ಅವಶ್ಯಕ ಸಾಮಗ್ರಿಯೊಂದಿಗೆ ಎರಡು ಹೆಲಿಕಾಪ್ಟರ್ ಗಳು ಕರ್ನೂಲಿನಿಂದ ಘಟನಾ ಸ್ಥಳಕ್ಕೆ ಹೊರಟಿವೆ. ಈ ದುರಂತದಲ್ಲಿ ವೈಎಸ್ಆರ್ ಅವರೊಂದಿಗೆ ಅವರ ಮುಖ್ಯ ಕಾರ್ಯದರ್ಶಿ ಸುಬ್ರಹ್ಮಣ್ಯಂ, ಭದ್ರತಾಧಿಕಾರಿ ವೆಸ್ಲಿ ಮತ್ತು ಇಬ್ಬರು ಪೈಲಟ್ ಗಳು ಸಹ ಮೃತಪಟ್ಟಿದ್ದಾರೆ.
(ಏಜೆನ್ಸೀಸ್)
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications