ಶುಕ್ರವಾರ ಸರಕಾರಿ ರಜೆ, ಯಾಕೆ ಬೇಕಿತ್ತು?

ಮುಖ್ಯಮಂತ್ರಿ ಯಡಿಯೂರಪ್ಪ ಚೀನಾ ಪ್ರವಾಸ ಕೈಗೊಂಡ ಹಿನ್ನೆಲೆಯಲ್ಲಿ ಸಂಪುಟ ಸಭೆಯ ನೇತೃತ್ವ ವಹಿಸಿದ್ದ ಸಚಿವ ಆಚಾರ್ಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸೆಫ್ಟೆಂಬರ್ 4 ರಂದು ಸರಕಾರಿ ಕಚೇರಿ, ಶಾಲಾ ಕಾಲೇಜ್ ಗಳು ರಜೆ ಘೋಷಣೆ ಮಾಡಿರುವ ಸಂಗತಿ ತಿಳಿಸಿದರು. ವೈಎಸ್ಆರ್ ಅಂತ್ಯಕ್ರಿಯೆಗೆ ಸಚಿವರ ನಿಯೋಗ ಇಂದು ಹೈದರಾಬಾದ್ ಗೆ ತೆರಳುತ್ತಿದ್ದು, ನಿಯೋಗದಲ್ಲಿ ಸಚಿವರಾದ ವಿ ಎಸ್ ಆಚಾರ್ಯ, ಆರ್ ಅಶೋಕ್, ರಾಮಚಂದ್ರೇಗೌಡ, ಜಿ ಜನಾರ್ದನರೆಡ್ಡಿ ಇರಲಿದ್ದಾರೆ.
ಪಕ್ಕದ ರಾಜ್ಯದ ಒಬ್ಬ ಹಿರಿಯ ನಾಯಕ ದುರ್ಘಟನೆಯಲ್ಲಿ ಅಸುನೀಗಿದುದಕ್ಕೆ ಶೋಕವ್ಯಕ್ತಪಡಿಸುವುದು ಮಾನವೀಯ ಗುಣ. ಆದರೆ, ಆ ರಾಜ್ಯ ಮುಖ್ಯಮಂತ್ರಿ ತೀರಿಕೊಂಡರೆ ಕರ್ನಾಟಕದಲ್ಲಿ ರಜೆ ಘೋಷಿಸುವ ಪ್ರಮೇಯ ಇರಲಿಲ್ಲ. ಹಂದಿಜ್ವರದ ಹಿನ್ನೆಲೆಯಲ್ಲಿ ಶಾಲಾಕಾಲೇಜುಗಳು ರಜೆ ಕೊಟ್ಟಿದ್ದವು. ಪಾಠ ಪ್ರವಚನಗಳು ನಿಯಮಿತವಾಗಿ ನಡೆಯದೆ ಶೈಕ್ಷಣಿಕ ಚಟುವಟಿಕೆಗಳಿಗೆ ಹಿನ್ನಡೆ ಉಂಟಾಗಿದೆ.
ಅಲ್ಲದೆ, ಆರ್ಥಿಕ ಹಿಂಜರಿಕೆ ಈ ದಿನಗಳಲ್ಲಿ ಉತ್ಪಾದನೆಯನ್ನು ಕುಂಠಿತ ಮಾಡುವ ರಜೆ ಬೇಕಿರಲಿಲ್ಲ. ಕರ್ನಾಟಕದ ಸರಕಾರಿ ದೊರೆಗಳು ರಜೆ ಘೋಷಿಸುವ ಮೂಲಕ ಕೆಟ್ಟ ಪರಿಪಾಠವನ್ನು ಜಾರಿಗೆ ತಂದಿದ್ದಾರೆ. ಪ್ರಧಾನಿ, ರಾಷ್ಟ್ರಪತಿಗಳು ತೀರಿದಾಗ ರಜೆ ಕೊಡಬೇಕೆ ಬೇಡವೇ ಎಂಬ ಚರ್ಚೆಗಳು ನಡೆದಿರುವಾಗ ಸೆಪ್ಟಂಬರ್ 4ರ ಶುಕ್ರವಾರದ ರಜೆ ನಮ್ಮ ಪ್ರಕಾರ ಅಸಿಂಧು.
ತಮಿಳು ನಾಡಿನಲ್ಲೂ ಶುಕ್ರವಾರ ರಜೆ ಘೋಷಿಸಲಾಗಿದೆ. ಈ ಘೋಷಣೆ ಬೆಳಗ್ಗೆಯೇ ಹೊರಬಿತ್ತು. ಪೆರಿಯಣ್ಣ ರಜೆ ಕೊಟ್ಟರೆಂದು ಚಿನ್ನ ತಂಬಿ ಯಡಿಯೂರಪ್ಪ ರಜೆ ಪ್ರಕಟಿಸಿದ್ದಾರೆಂಬ ವಿಮರ್ಶೆ ಕುಹಕವಾಗುವುದಿಲ್ಲ.
(ದಟ್ಸ್ ಕನ್ನಡ ವಾರ್ತೆ)
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications