ಗುಲ್ಬರ್ಗದಲ್ಲಿ ವಿಜ್ಞಾನ ತಂತ್ರಜ್ಞಾನ ಸಮ್ಮೇಳನ

'ಮನುಕುಲದ ಒಳಿತಿಗಾಗಿ ವಿಜ್ಞಾನ-ತಂತ್ರಜ್ಞಾನ' ಈ ಸಮ್ಮೇಳನದ ಪ್ರಮುಖ ವಿಷಯ. ಎರಡು ದಿನಗಳ ಅವಧಿಯಲ್ಲಿ ಈ ವಿಷಯದ ವಿವಿಧ ಆಯಾಮಗಳಿಗೆ ಸಂಬಂಧಿಸಿದ ಅನೇಕ ವಿಚಾರಸಂಕಿರಣಗಳು ನಡೆಯಲಿವೆ. ಪ್ರೊ ಯು ಆರ್ ರಾವ್, ಪ್ರೊ ಪಿ ಬಲರಾಂ, ಪ್ರೊ ಎಂ ಐ ಸವದತ್ತಿ, ಪ್ರೊ ರೊದ್ದಂ ನರಸಿಂಹ, ಡಾ ವಿ ಪ್ರಕಾಶ್, ಡಾ ಪಿ ಎಸ್ ಶಂಕರ್, ನಾಗೇಶ ಹೆಗಡೆ - ಇವರು ಭಾಷಣಕಾರರಲ್ಲಿ ಪ್ರಮುಖರು.
ಸಮ್ಮೇಳನದ ಸಂದರ್ಭದಲ್ಲಿ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ 'ವಿಜ್ಞಾನ ಲೋಕ' ಪತ್ರಿಕೆಯ ವಿಶೇಷ ಸಂಚಿಕೆಯನ್ನೂ ಹೊರತರಲಾಗುವುದು. ಸಮ್ಮೇಳನದಲ್ಲಿ ಭಾಗವಹಿಸಲು ಯಾವುದೇ ನೋಂದಣಿ ಶುಲ್ಕ ಇಲ್ಲ. ಹೆಚ್ಚಿನ ವಿವರಗಳಿಗೆ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಯವರನ್ನು [email protected] ವಿಳಾಸದಲ್ಲಿ ಸಂಪರ್ಕಿಸಬಹುದು.
(ದಟ್ಸ್ ಕನ್ನಡವಾರ್ತೆ)











Click it and Unblock the Notifications