ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜ್ಯದಲ್ಲಿ ಬಂಡವಾಳ ಹೂಡಿ, ಸಿಎಂ ಮನವಿ
ಚೀನಾ ಪ್ರವಾಸದಲ್ಲಿರುವ ಯಡಿಯೂರಪ್ಪ ಇಲ್ಲಿನ ವಾಣಿಜ್ಯೋದ್ಯಮಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ವಿಷನ್ ಗ್ರೂಪ್ ಅನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೈಗಾರಿಕೆ ಬೆಳವಣಿಗೆಗಾಗಿ ತಯಾರಿಸಿದ ನೀಲಿ ನಕ್ಷೆಯಲ್ಲಿ ಕೈಗಾರಿಕಾ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ವಿವರಿಸಿದ್ದಾರೆ.
ದೇಶದ ಅಭಿವೃದ್ದಿ ಪಥದಲ್ಲಿ ಕರ್ನಾಟಕ ಮಂಚೂಣಿಯಲ್ಲಿ ನಿಲ್ಲಲು ಅತ್ಯುತ್ತಮ ಗುಣಮಟ್ಟದ ಮಾನವ ಸಂಪನ್ಮೂಲ ಕಾರಣ ಎಂದು ಉದ್ಯಮಿಗಳಿಗೆ ವಿವರಿಸಿರುವ ಮುಖ್ಯಮಂತ್ರಿಗಳು, ಅಭಿವೃದ್ದಿ ವಿಚಾರದಲ್ಲಿ ನಮ್ಮ ರಾಜ್ಯ ದೇಶದಲ್ಲೇ ಮಂಚೂಣಿಗೆ ಬರಬೇಕೆನ್ನುವ ಗುರಿಯೊಂದಿಗೆ ಕೈಗಾರಿಕಾ ನೀತಿ ರೂಪಿಸಲಾಗಿದೆ ಎಂದು ಯಡಿಯೂರಪ್ಪ ಸಭೆಯಲ್ಲಿ ಹೇಳಿದ್ದಾರೆ.
(ಏಜನ್ಸೀಸ್)
Comments
Story first published: Friday, September 4, 2009, 15:16 [IST]