ಅಭಿಮಾನದ ವಿಷಕ್ಕೆ ಆಂಧ್ರದಲ್ಲಿ ನೂರಾರು ಬಲಿ

ತೆಲುಗು ಚಿತ್ರರಂಗ ಹಾಗೂ ರಾಜಕಾರಣದಲ್ಲಿ ಅನಭಿಷಕ್ತ ದೊರೆಯಾಗಿ ಮೆರೆದಿದ್ದ ಎನ್ ಟಿ ರಾಮರಾವ್ ಅವರ ನಿಧನಕ್ಕಿಂತ ವೈಎಸ್ಆರ್ ಸಾವು ಜನಸಾಮಾನ್ಯರ ಭಾರಿ ಪ್ರಭಾವ ಬೀರಿದೆ. ಬಹುಶಃ ಭಾರತದ ರಾಜಕಾರಣದ ಇತಿಹಾಸದಲ್ಲಿ ಯಾವ ನೇತಾರರಿಗೂ ಇಂತಹ ಭಾವನಾತ್ಮಕ ದೃಶ್ಯ ಸಿಗುವುದು ಅಪರೂಪ. ನಲ್ಲಮಲ್ಲ ಅರಣ್ಯದಲ್ಲಿ ಹೆಲಿಕ್ಯಾಪ್ಟರ್ ಕಾಣೆಯಾಗಿ ವೈಎಸ್ಆರ್ ನಾಪತ್ತೆಯಾಗಿದ್ದಾರೆ ಎನ್ನುವುದು ಅಲ್ಲಿಯ ಜನತೆಗೆ ಅರಗಿಸಿಕೊಳ್ಳಲಾಗದ ಸತ್ಯವಾಗಿತ್ತು. ನೆಚ್ಚಿನ ನಾಯಕ, ಬಡವರ ಬಂಧು ಅಕಾಲಿಕ ಮರಣಕ್ಕೆ ತುತ್ತಾಗಿದ್ದಾರೆ ಎಂದು ಸುದ್ದಿ ಮುಟ್ಟುತ್ತಿದ್ದಂತೆಯೇ ಆಂಧ್ರಪ್ರದೇಶ ಕುಸಿದು ಕುಳಿತಿತು.
ಜನಸಾಮಾನ್ಯರಿಗೆ ಗಾಢ್ ಫಾದರ್ ಆಗಿದ್ದ ವೈಎಸ್ಆರ್ ಸಾವು ಅವರಿಗೆ ಬರಸಿಡಿಲಿನಂತಾಗಿತ್ತು. ಅನೇಕರು ಅತ್ಮಹತ್ಯೆ ಮಾಡಿಕೊಂಡರು, ಹಲವರು ಹೃದಯಾಘಾತದಿಂದ ಮೃತಪಟ್ಟರು, ಅಸಂಖ್ಯ ಜನರು ಆಸ್ಪತ್ರೆಗೆ ಸೇರಿದ್ದಾರೆ. ಮತ್ತೊಂದಿಷ್ಟು ಮಂದಿ ವೈಎಸ್ಆರ್ ಸಾವು ನಮಗೆ ತುಂಬಲಾರದ ನಷ್ಟವಾಗಿದೆ. ಅವರ ಹುದ್ದೆ ತುಂಬಲು ಅವರ ಮಗ ಜಗನ್ಮೋಹನ್ ರೆಡ್ಡಿ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜಶೇಖರರೆಡ್ಡಿ ಅವರನ್ನು ಜನಸಾಮಾನ್ಯರು ಏಕೆ ಅಷ್ಟೊಂದು ಪ್ರೀತಿಸುತ್ತಾರೆ ಎನ್ನುವುದಕ್ಕೆ ಸ್ಪಷ್ಟ ಕಾರಣವಿದೆ. ವೈಎಸ್ಆರ್ ಬರೀ ಮುಖ್ಯಮಂತ್ರಿ ಆಗಿರಲಿಲ್ಲ. ಬಡವರ ಬಂಧು ಆಗಿದ್ದರು. ಗ್ರಾಮದಲ್ಲಿರುವ ಕಟ್ಟಕಡೆಯ ಪ್ರಜೆಗೂ ಸರಕಾರಿ ಸವಲತ್ತುಗಳು ಸಿಗಬೇಕು ಎಂಬ ಏಕೈಕ ಗುರಿ ಹೊಂದಿದ್ದ ರೆಡ್ಡಿ ಅವರ ಮಾನವೀಯ ಚಿಂತನೆಯೇ ಜನರ ಅತಿರೇಕದ ಅಭಿಮಾನಕ್ಕೆ ಸಾಕ್ಷಿಯಾಗಿದೆ. ಜನಸಾಮಾನ್ಯರ ಏಳ್ಗೆಗೆ ಅವರು ಕೈಗೊಂಡ ಆರೋಗ್ಯಶ್ರೀ, ಜಲಯಜ್ಞ, ಶೇ. 3ರ ಬಡ್ಡಿ ಸಾಲ, ವಯೋವೃದ್ಧರಿಗೆ ಮಾಶಾಸನ ಸೇರಿ ಅನೇಕ ಜನಪರ ಕಾರ್ಯಕ್ರಮಗಳು ರೆಡ್ಡಿ ಅವರು ಜನರಿಗೆ ಮತ್ತಷ್ಟು ಹತ್ತಿರವಾದರು.
ವೈಎಸ್ಆರ್ ನಿಧನದ ಸುದ್ದಿ ಕೇಳಿ ತಿಂಗಳು ಮಾಶಾಸನ ಪಡೆಯುತ್ತಿದ್ದ ವಿಕಾಲಾಂಗ ದಂಪತಿ ಮುಂದಿನ ಜೀವನ ಹೇಗೆ ಎಂದು ದೊಡ್ಡ ಪ್ರಶ್ನೆಯಾಗಿ ಬಾವಿಗೆ ಹಾರಿ ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಜನರಿಗಾಗಿ ಜೀವನ ತ್ಯಾಗ ಮಾಡಿದ ವೈಎಸ್ಆರ್ ಗೆ, ಅವರಿಗಾಗಿ ನನ್ನ ಜೀವನ ತ್ಯಾಗ ಮಾಡುವೆ ಎಂದು ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆಗಳು ನಡೆದಿವೆ.
ರಾಜ್ಯ ತುಂಬಾ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆಯೇ ವೈಎಸ್ಆರ್ ಮಗ ಜಗನ್ಮೋಹನ್ ರೆಡ್ಡಿ, ಸಾರ್ವಜನಿಕರಲ್ಲಿ ಶಾಂತಿ ಸಮಾಧಾನದಿಂದ ವರ್ತಿಸಿ, ಅತ್ಮಹತ್ಯೆಯಂತಹ ಭೀಕರ ಕೆಲಸ ಕೈಹಾಕಬೇಡಿ ಎಂದು ಅಭಿಮಾನಿಗಳನ್ನು ಕೋರಿದ್ದಾರೆ. ನಾವು ನೀವು ಎಲ್ಲರೂ ಸೇರಿ ತಂದೆಯನ್ನು ಬಿಳ್ಕೊಡೋಣ ಎಂದು ಮಾಡಿಕೊಂಡ ಮನವಿಯನ್ನು ಕೇಳಿಸಿಕೊಳ್ಳುವ ಸ್ಥಿತಿಯಲ್ಲಿ ಅಭಿಮಾನಿಗಳಿಲ್ಲ. ಒಟ್ಟಿನಲ್ಲಿ ಭಾರತದ ರಾಜಕೀಯ ಇತಿಹಾಸದಲ್ಲಿ ವೈಎಸ್ಆರ್ ದುರಂತ ಅಂತ್ಯ ಮತ್ತೊಂದು ಇತಿಹಾಸವನ್ನು ಹುಟ್ಟು ಹಾಕಿದ್ದಂತೂ ಸುಳ್ಳಲ್ಲ.
(ಏಜನ್ಸೀಸ್)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications