ವೈಎಸ್ಆರ್ ಪಾರ್ಥಿವ ಶರೀರದ ಮೆರವಣಿಗೆ
ಹೈದರಾಬಾದ್, ಸೆ. 4 : ಅಕಾಲಿಕ ಮರಣ ಹೊಂದಿದ ಮುಖ್ಯಮಂತ್ರಿ ರಾಜಶೇಖರರೆಡ್ಡಿ ಅವರ ಪಾರ್ಥೀನ ಶರೀರವನ್ನು ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಡುವ ಕಾರ್ಯಕ್ರಮವಿದ್ದು, ಆಂಧ್ರಪ್ರದೇಶದ ಕಾಂಗ್ರೆಸ್ ಕಚೇರಿ ಗಾಂಧಿ ಭವನದಿಂದ ಪಾರ್ಥೀವ ಶರೀರದ ಮೆರವಣಿಗೆ ಹೊರಟಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಆಗಮಿಸಿದ್ದಾರೆ. ಇನ್ನೇನು ಕೆಲ ನಿಮಿಷಗಳಲ್ಲಿ ವೈಎಸ್ ಆರ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ.
ತಮ್ಮ ನೆಚ್ಚಿನ ನಾಯಕನನ್ನು ಕೊನೆಯ ಬಾರಿ ಕಣ್ಣಾರೆ ಕಾಣಬೇಕು ಎಂಬ ಕಾರಣದಿಂದ ಅಭಿಮಾನಿಗಳ, ಕಾರ್ಯಕರ್ತರ ನೂಕು ನುಗ್ಗಲು ಆರಂಭವಾಗಿದೆ. ಭದ್ರತೆಗಾಗಿ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದ್ದು, ನಿರೀಕ್ಷೆಗೂ ಮೀರಿದ ಜನರು ಕೂಡಿದ್ದು ಭದ್ರತೆ ಒದಗಿಸುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮೆರವಣಿಗೆಯಲ್ಲಿ ಕೆಲ ಕಡೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿರುವ ಘಟನೆಯೂ ನಡೆದಿದೆ. ಹೈದರಾಬಾದ್ ನಲ್ಲಿ ರಸ್ತೆ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ವೈಎಸ್ಆರ್ ಅವರ ಅಂತ್ಯಕ್ರಿಯೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕೇಂದ್ರ ಸಚಿವರು ದಂಡು, ರಾಜ್ಯದಿಂದ ವಿ ಎಸ್ ಆಚಾರ್ಯ, ಸುರೇಶಕುಮಾರ್, ಜನಾರ್ದನರೆಡ್ಡಿ, ರಾಮಚಂದ್ರೇಗೌಡ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್. ಆರ್ ವಿ ದೇಶಪಾಂಡೆ, ವಿ ಎಸ್ ಉಗ್ರಪ್ಪ, ಎಡಪಕ್ಷದ ಮುಖಂಡ ಸೀತಾರಾಂ ಯೆಚೂರಿ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ.
32 ಅಭಿಮಾನಿಗಳು ಸಾವು
ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ಆಂಧ್ರಪ್ರದೇಶದಾದ್ಯಂತ ಅವರ 32 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ನೆಚ್ಚಿನ ನಾಯಕ ಇನ್ನಿಲ್ಲ ಎನ್ನುವುದು ಅವರಿಗೆ ಅರಗಿಸಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಎಪಿಸಿಸಿ ಕಚೇರಿ ಗಾಂಧಿ ಭವನದಲ್ಲಿಂತೂ ಕಾರ್ಯಕರ್ತರ ಆಕ್ರಂದನ ಹೇಳತೀರದಾಗಿದೆ.
(ಏಜನ್ಸೀಸ್)
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications