ವೈಎಸ್ಆರ್ ಪಾರ್ಥಿವ ಶರೀರದ ಮೆರವಣಿಗೆ
ಹೈದರಾಬಾದ್, ಸೆ. 4 : ಅಕಾಲಿಕ ಮರಣ ಹೊಂದಿದ ಮುಖ್ಯಮಂತ್ರಿ ರಾಜಶೇಖರರೆಡ್ಡಿ ಅವರ ಪಾರ್ಥೀನ ಶರೀರವನ್ನು ನಗರದ ಲಾಲ್ ಬಹದ್ದೂರ್ ಶಾಸ್ತ್ರಿ ಮೈದಾನದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಇಡುವ ಕಾರ್ಯಕ್ರಮವಿದ್ದು, ಆಂಧ್ರಪ್ರದೇಶದ ಕಾಂಗ್ರೆಸ್ ಕಚೇರಿ ಗಾಂಧಿ ಭವನದಿಂದ ಪಾರ್ಥೀವ ಶರೀರದ ಮೆರವಣಿಗೆ ಹೊರಟಿದ್ದು, ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಅಭಿಮಾನಿಗಳು, ಕಾರ್ಯಕರ್ತರು ಆಗಮಿಸಿದ್ದಾರೆ. ಇನ್ನೇನು ಕೆಲ ನಿಮಿಷಗಳಲ್ಲಿ ವೈಎಸ್ ಆರ್ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗುತ್ತಿದೆ.
ತಮ್ಮ ನೆಚ್ಚಿನ ನಾಯಕನನ್ನು ಕೊನೆಯ ಬಾರಿ ಕಣ್ಣಾರೆ ಕಾಣಬೇಕು ಎಂಬ ಕಾರಣದಿಂದ ಅಭಿಮಾನಿಗಳ, ಕಾರ್ಯಕರ್ತರ ನೂಕು ನುಗ್ಗಲು ಆರಂಭವಾಗಿದೆ. ಭದ್ರತೆಗಾಗಿ ಸಾಕಷ್ಟು ಪೊಲೀಸರನ್ನು ನಿಯೋಜಿಸಲಾಗಿದ್ದು, ನಿರೀಕ್ಷೆಗೂ ಮೀರಿದ ಜನರು ಕೂಡಿದ್ದು ಭದ್ರತೆ ಒದಗಿಸುವುದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿದೆ. ಮೆರವಣಿಗೆಯಲ್ಲಿ ಕೆಲ ಕಡೆ ಪೊಲೀಸರು ಲಘು ಲಾಠಿ ಪ್ರಹಾರ ಮಾಡಿರುವ ಘಟನೆಯೂ ನಡೆದಿದೆ. ಹೈದರಾಬಾದ್ ನಲ್ಲಿ ರಸ್ತೆ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.
ವೈಎಸ್ಆರ್ ಅವರ ಅಂತ್ಯಕ್ರಿಯೆಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಕೇಂದ್ರ ಸಚಿವರು ದಂಡು, ರಾಜ್ಯದಿಂದ ವಿ ಎಸ್ ಆಚಾರ್ಯ, ಸುರೇಶಕುಮಾರ್, ಜನಾರ್ದನರೆಡ್ಡಿ, ರಾಮಚಂದ್ರೇಗೌಡ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್. ಆರ್ ವಿ ದೇಶಪಾಂಡೆ, ವಿ ಎಸ್ ಉಗ್ರಪ್ಪ, ಎಡಪಕ್ಷದ ಮುಖಂಡ ಸೀತಾರಾಂ ಯೆಚೂರಿ ಮತ್ತಿತರ ನಾಯಕರು ಪಾಲ್ಗೊಳ್ಳಲಿದ್ದಾರೆ.
32 ಅಭಿಮಾನಿಗಳು ಸಾವು
ಮುಖ್ಯಮಂತ್ರಿ ವೈ ಎಸ್ ರಾಜಶೇಖರರೆಡ್ಡಿ ಅವರ ಅಕಾಲಿಕ ಮರಣದಿಂದ ಆಂಧ್ರಪ್ರದೇಶದಾದ್ಯಂತ ಅವರ 32 ಅಭಿಮಾನಿಗಳು ಸಾವನ್ನಪ್ಪಿದ್ದಾರೆ. ನೆಚ್ಚಿನ ನಾಯಕ ಇನ್ನಿಲ್ಲ ಎನ್ನುವುದು ಅವರಿಗೆ ಅರಗಿಸಿಕೊಳ್ಳುವುದು ಸಾಧ್ಯವಾಗುತ್ತಿಲ್ಲ. ಎಪಿಸಿಸಿ ಕಚೇರಿ ಗಾಂಧಿ ಭವನದಲ್ಲಿಂತೂ ಕಾರ್ಯಕರ್ತರ ಆಕ್ರಂದನ ಹೇಳತೀರದಾಗಿದೆ.
(ಏಜನ್ಸೀಸ್)
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications