ಶಿವಮೊಗ್ಗ : ಗೋಪಾಲಗೌಡ ಬಡಾವಣೆಯಲ್ಲಿ ದರೋಡೆ

ಮಾರುತಿ ಸ್ವಿಫ್ಟ್ ಕಾರಲ್ಲಿ ಬಂದ ಐದು ಜನ ಮುಸುಕುಧಾರಿಗಳು ನೇರವಾಗಿ ಗೋಪಾಲಗೌಡ ಬಡಾವಣೆಯಲ್ಲಿ ವಾಸವಾಗಿರುವ ಬಿ.ಆರ್.ಪಿ.ಯ ಶ್ರೀರಂಭಾಪುರಿ ಕಾಲೇಜಿನ ಉಪನ್ಯಾಸಕ ಲೋಕೇಶಪ್ಪ(51)ರವರ ಮನೆಗೆ ನುಗ್ಗಿದರು. ನಂತರ, ರಿವಾಲ್ವರ್, ಲಾಂಗು ಮತ್ತು ಮಚ್ಚುಗಳನ್ನು ತೋರಿಸಿ ಲೋಕೇಶಪ್ಪ ಮತ್ತು ಅವರ ಹೆಂಡತಿ ಲತಾ ಹಾಗೂ ಇಬ್ಬರು ಮಕ್ಕಳನ್ನು ಒಂದು ಕೊಠಡಿಯಲ್ಲಿ ಕೂಡಿ ಹಾಕಿದರು. ಮನೆಯಲ್ಲಿದ್ದ 49,500ರೂ. ನಗದು ಹಣ ಹಾಗೂ 143 ಗ್ರಾಂ ಬಂಗಾರದ ಆಭರಣಗಳನ್ನು ದೋಚಿಕೊಂಡು ಪರಾರಿಯಾದರು.
ಲೋಕೇಶಪ್ಪ ತಮ್ಮ ದೂರಿನಲ್ಲಿ, ಮುಸುಕುಧಾರಿಗಳು ಮಾರುತಿ ಸ್ವಿಫ್ಟ್ ಸಿಲ್ವರ್ ಕಾರಿನಲ್ಲಿ ಮನೆಯ ಬಳಿ ಇಳಿದರು. ಅದರ ನಂ.ಪ್ಲೇಟ್ ಕನ್ನಡ ಅಂಕೆಗಳಲ್ಲಿ ಬರೆಯಲಾಗಿತ್ತು. ಕೆಎ12 ಮಾತ್ರ ನಾನು ನೋಡಿದ್ದು, ದರೋಡೆಕೋರರು ಒಟ್ಟು 5 ಜನರಿದ್ದರು ಎಂದು ವಿವರಿಸಿದ್ದಾರೆ. ಲೋಕೇಶಪ್ಪರವರ ಪತ್ನಿ ಲತಾರವರು ಸಹ ಸಾಗರ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ತುಂಗಾನಗರ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದ್ದು, ಸಬ್ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್ ಮತ್ತು ಅಪರಾಧ ವಿಭಾಗದ ಸಬ್ಇನ್ಸ್ಪೆಕ್ಟರ್ ಬಿ.ನರಸಯ್ಯ ತನಿಖೆ ಕೈಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ದರೋಡೆಕೋರರ ತಲೆನೋವು ಇತ್ತೀಚೆಗೆ ಹೆಚ್ಚಾಗಿದ್ದು, ಪೊಲೀಸ್ ಇಲಾಖೆ ಈ ದರೋಡೆಕೋರರ ಸಮೀಪಕ್ಕೂ ತಲುಪಲು ಸಾಧ್ಯವಾಗುತ್ತಿಲ್ಲ ಎಂಬುದು ಪದೇ ಪದೇ ಸಾಬೀತಾಗುತ್ತಲೇ ಇದೆ. ಪೊಲೀಸ್ ಇಲಾಖೆ ಬಿಗಿ ಕಳೆದುಕೊಂಡಿದೆಯಾ? ಸ್ವತಃ ಪೊಲೀಸ್ ಇಲಾಖೆಯೇ ಉತ್ತರಿಸಬೇಕಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications