ಜಿನ್ನಾ ಪುಸ್ತಕಕ್ಕೆ ಆರ್ಥಿಕ ನೆರವು ನೀಡಿಲ್ಲ : ವಾಡಿಯಾ

ಟಿವಿವೊಂದಕ್ಕೆ ಸಂದರ್ಶನ ನೀಡಿದ ಅವರು, ಇಂತಹ ಅಧಾರ ರಹಿತ ವರದಿಗಳು ಸೃಷ್ಟಿಯಾಗುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ಮೊಹ್ಮದ್ ಅಲಿ ಜಿನ್ನಾ ನನ್ನ ತಾತ ಎನ್ನುವುದನ್ನು ಯಾರಿಂದಲೂ ಬದಲಿಸಲು ಸಾಧ್ಯವಿಲ್ಲ. ಜಸ್ವಂತ್ ಸಿಂಗ್ ನಂತಹ ವ್ಯಕ್ತಿಗಳಿಂದ ಪ್ರಮಾಣಪತ್ರ ಪಡೆಯುವ ಅವಶ್ಯಕತೆ ನನಗಿಲ್ಲ. ಎಲ್ಲವೂ ಇತಿಹಾಸದಲ್ಲಿ ಅಡಗಿದೆ. ಅನಗತ್ಯವಾಗಿ ಇಂತಹ ಪ್ರಕರಣಗಳನ್ನು ತೆಗೆದುಕೊಂಡು ವಿವಾದ ಸೃಷ್ಟಿಸುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಭಾರತ ವಿಭಜನೆಗೆ ಸಂಬಂಧಿಸಿದಂತೆ ಜಸ್ವಂತ್ ಸಿಂಗ್ ಅವರು ಬರೆದಿರುವ ಪುಸ್ತಕದಲ್ಲಿ ತತ್ವ ಸಿದ್ಧಾಂತ ಉಲ್ಲಂಘನೆ ಎಂದು ಆರೋಪಿಸಿ ಜಸ್ವಂತ್ ಸಿಂಗ್ ಅವರನ್ನು ಬಿಜೆಪಿ ಉಚ್ಚಾಟನೆ ಮಾಡಿರುವುದು ಉತ್ತಮ ಬೆಳವಣಿಗೆಯಂತೂ ಅಲ್ಲ. ಬಿಜೆಪಿಯ ಈ ಕ್ರಮದಿಂದ ನನಗೆ ತೀವ್ರ ಆಘಾತ, ದುಃಖ ಮತ್ತು ಅಚ್ಚರಿ ಆಗಿದೆ. ಕಳೆದ 40 ವರ್ಷಗಳಿಂದ ಬಿಜೆಪಿ ಸರ್ವೋಚ್ಚ ನಾಯಕ ಎಲ್ ಕೆ ಅಡ್ವಾಣಿ ನನ್ನ ಅತ್ಮೀಯ ಸ್ನೇಹಿತಲ್ಲಿ ಒಬ್ಬರು ಎಂದು ವಾಡಿಯಾ ವಿವರಿಸಿದ್ದಾರೆ.
ಜಸ್ವಂತ್ ಸಿಂಗ್ ಬರೆದಿರುವ ಜಿನ್ನಾ ಇಂಡಿಯಾ ಪಾರ್ಟಿಶನ್ ಇಂಡಿಪೆಂಡನ್ಸ್ ನಲ್ಲಿ ಅಖಂಡ ಭಾರತ ವಿಭಜನೆಯಾಗಲು ಜವಾಹರ್ ಲಾಲ್ ನೆಹರು ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್ ಕಾರಣ ಎನ್ನುವುದಲ್ಲದೇ ಜಿನ್ನಾ ಅವರಿಗೆ ಪುಸ್ತಕದಲ್ಲಿ ಹಿರೋ ಪಟ್ಟ ನೀಡಲಾಗಿದೆ. ಇದು ಬಿಜೆಪಿಯಲ್ಲಿ ಭಾರಿ ಬಿರುಗಾಳಿಯನ್ನೇ ಎಬ್ಬಿಸಿತ್ತು. ಪರಿಣಾಮ ಜಸ್ವಂತ್ ಸಿಂಗ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ.
(ಏಜನ್ಸೀಸ್)
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications