ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್ ನಲ್ಲಿ ಕಳ್ಳರಿದ್ದಾರೆ : ಕೃಷ್ಣಪ್ಪ

By Staff
|
Google Oneindia Kannada News

MLA Krishnappa
ಬೆಂಗಳೂರು, ಸೆ. 7 : ಕಾಂಗ್ರೆಸ್ ನಲ್ಲಿ ಕೆಲ ಕಳ್ಳರು ಸೇರಿಕೊಂಡಿದ್ದಾರೆ. ಇದರಿಂದಾಗಿಯೇ ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಪಕ್ಷದ ಗೆಲುವಿನ ಅಂತರ ಕಡಿಮೆಯಾಯಿತು. ಪಕ್ಷಕ್ಕೆ ಮೋಸ ಮಾಡಿದವರನ್ನು ಆ ಭಗವಂತ ನೋಡಿಕೊಳ್ಳುತ್ತಾನೆ ಎಂದು ವಿಜಯನಗರ ಕ್ಷೇತ್ರದ ಶಾಸಕ ಎ ಕೃಷ್ಣಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿ ಹಮ್ಮಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸ್ ಅವರ 94ನೇ ಜನ್ಮದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಮಾಜಿ ಸಚಿವ ಸೋಮಣ್ಣ, ಭೀಮಣ್ಣ ಸೇರಿದಂತೆ ಯಾವ ಬೋ... ಏನು ಮಾಡಿದ್ದಾರೆ ಎಂಬುದು ಗೊತ್ತಿದೆ ಎಂದು ಅವಾಚ್ಯ ಶಬ್ಧ ಬಳಸಿ ಸೋಮಣ್ಣ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ದುಷ್ಟರು, ದರಿದ್ರರು, ನೀತಿಗೆಟ್ಟವರು ವಿಧಾನಸೌಧದಲ್ಲಿ ಕುಳಿತಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾದ ನಂತರ ಸಾಮಾಜಿಕ ನ್ಯಾಯ ದೊರೆಯದೆ ರಾಜ್ಯದಲ್ಲಿ ಅಲ್ಲೋಲಕಲ್ಲೋಲ ಉಂಟಾಗಿದೆ. ದೂರದೃಷ್ಟಿ ಇರದ, ನೀತಿ ನಿಯಮ, ಸಂವಿಧಾನ ಹಾಗೂ ನ್ಯಾಯಾಲಯದ ಆದೇಶವನ್ನೂ ಕೂಡ ಉಲ್ಲಂಘಿಸುವಂತಹ ಸರಕಾರ ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿದೆ ಎಂದು ಕೃಷ್ಣಪ್ಪ ವಿಷಾದಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X