ರಾಜ್ಯಪಾಲರ ಹೇಳಿಕೆಗೆ ಸಚಿವರ ತೀವ್ರ ಆಕ್ಷೇಪ

ರಾಜಭವನದ ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ ರಾಜ್ಯಪಾಲರೊಬ್ಬರು ಬಹಿರಂಗವಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಗ್ರಾಸವಾಗಿದೆ. ಅಲ್ಪಸಂಖ್ಯಾತರಿಗೆ ಬಿಜೆಪಿ ಸರಕಾರದಲ್ಲಿ ರಕ್ಷಣೆ ಇಲ್ಲ ಎಂಬ ರಾಜ್ಯಪಾಲರ ಹೇಳಿಕೆಗೆ ಸರಕಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ರಾಜ್ಯಪಾಲರು ಲಕ್ಷ್ಮಣ ರೇಖೆ ದಾಟುತ್ತಿದ್ದಾರೆ ಎಂಬರ್ಥದಲ್ಲಿ ಹರಿಹಾಯ್ದಿದೆ. ಇದರಿಂದ ಸಂವಿಧಾನಾತ್ಮಕ ಮಹತ್ವದ ಎರಡು ಸಂಸ್ಥೆಗಳು ಸಮರದ ಹಾದಿ ಹಿಡಿಯುತ್ತಿವೆ.
ರಾಜ್ಯಪಾಲರು ಸಿಬಿಐನಿಂದ ಆರೋಪ ಪಟ್ಟಿಗೆ ಒಳಗಾಗಿರುವ ಸಚಿವ ಸುಧಾಕರ್ ರಾಜೀನಾಮೆ ಪಡೆಯಬೇಕು. ಕೃಷ್ಣಯ್ಯ ಶೆಟ್ಟಿ ಕರ್ನಾಟಕ ಗೃಹ ಮಂಡಳಿಯಲ್ಲಿ ನಡೆಸಿರುವ ಅವ್ಯವಹಾರಗಳನ್ನು ಲೋಕಾಯುಕ್ತ ತನಿಖೆಗೆ ಸೂಚಿಸಿದ್ದರೂ ಅವರು ಸ್ಪಂದಿಸಿಲ್ಲ ಎಂಬ ಮಾತನ್ನೂ ಹೇಳಿದ್ದಾರೆ. ಇದರಿಂದ ರಾಜ್ಯಪಾಲರು ಅಸಮಾಧಾನಗೊಂಡು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ರಾಜ್ಯಪಾಲರು ವಿರುದ್ಧ ಸಚಿವರಾದ ಸುರೇಶಕುಮಾರ್, ಬಿ ಎನ್ ಬಚ್ಚೇಗೌಡ, ಶಾಸಕ ಸಿಟಿ ರವಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರ ವರ್ತನೆ ಹೀಗೆ ಮುಂದುವರೆದಲ್ಲಿ ರಾಷ್ಟ್ರಪತಿಗಳಿಗೆ ದೂರು ಸಲ್ಲಿಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications