ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಸ್ತ್ರೀಯ ಭಾಷೆ : ತಕರಾರು ಅರ್ಜಿ ವಾಪಸ್ ?

By Staff
|
Google Oneindia Kannada News

Mukhyamantri chandru
ಬೆಂಗಳೂರು, ಸೆ. 8 : ಕನ್ನಡಕ್ಕೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಕಲ್ಪಿಸುವುದಕ್ಕೆ ವಿರೋಧಿಸಿ ಸಲ್ಲಿಸಿರುವ ಮೊಕದ್ದಮೆಯನ್ನು ಹಿಂದಕ್ಕೆ ಪಡೆಯಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಮಿಳುನಾಡು ಮೌಕಿಕ ಭರವಸೆ ನೀಡಿದೆ ಎಂದು ಕನ್ನಡ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿಕೆ ನೀಡಿದ್ದಾರೆ.

ಬೆಂಗಳೂರು ಮತ್ತು ಚೆನ್ನೈ ನಲ್ಲಿ ಪ್ರತಿಮೆ ಅನಾವರಣಗೊಂಡ ನಂತರ ಉಭಯ ರಾಜ್ಯಗಳ ನಡುವಣ ಸಂಬಂಧ ಸುಧಾರಿಸಿದೆ. ತಾವು ಅರ್ಜಿದಾರರ ವಕೀಲರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಅವರಿಂದ ಈ ಭರವಸೆ ದೊರೆತಿದೆ ಎಂದು ಚಂದ್ರು ಹೇಳಿಕೆ ನೀಡಿದ್ದಾರೆ.

ತಮಿಳುನಾಡಿನಲ್ಲಿ ತಮಿಳು ಭಾಷೆಯ ಅಭಿವೃದ್ದಿಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ರಾಮಸ್ವಾಮಿ ಅವರು ಕನ್ನಡ ಮತ್ತು ತಮಿಳು ಬೇರೆ ಬೇರೆ ಅಲ್ಲ. ಕೇಂದ್ರದಿಂದ ಹೆಚ್ಚಿನ ಆರ್ಥಿಕ ನೆರವು ಪಡೆಯಲು ಯೋಜನಾಬದ್ದ ಕ್ರಿಯಾಯೋಜನೆ ರೂಪಿಸುವಂತೆ ನೀಡಿರುವ ಸಲಹೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಚಂದ್ರು ಹೇಳಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X