ಸೆ. 9 ರಿಂದ ಮೂರು ದಿನಗಳ ಅಧಿವೇಶನ ಆರಂಭ

ಆರು ದಿನಗಳ ಚೀನಾ ಪ್ರವಾಸದ ನಂತರ ಮಂಗಳವಾರ ಬೆಳಗ್ಗೆ ಬೆಂಗಳೂರಿಗೆ ಆಗಮಿಸಿದ ನಂತರ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯಪಾಲರು ನೀಡಿರುವ ಹೇಳಿಕೆ ಇದೀಗ ಮುಗಿದಿರುವ ಅಧ್ಯಾಯ. ಮಾಧ್ಯಮಗಳಲ್ಲಿ ಬಂದಿರುವ ವರದಿಗೆ ತಲೆ ಕೆಡಿಸಿಕೊಳ್ಳಬೇಡಿ. ಸರಕಾರದ ಸಹಕಾರದೊಂದಿಗೆ ಕೆಲಸ ಮಾಡುವುದಾಗಿ ಸ್ವತಃ ರಾಜ್ಯಪಾಲರು ತಿಳಿಸಿದ್ದಾರೆ. ಗೃಹ ಸಚಿವ ವಿ ಎಸ್ ಆಚಾರ್ಯ ಅವರು ಈ ಬಗ್ಗೆ ರಾಜ್ಯಪಾಲರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ ಎಂದು ಯಡಿಯೂರಪ್ಪ ವಿವರಿಸಿದರು.
ಚೀನಾ ಪ್ರವಾಸದ ಬಗ್ಗೆ ಪ್ರತಿಪಕ್ಷಗಳು ತೀವ್ರವಾಗಿ ಟೀಕಿಸತೊಡಗಿವೆ. ಪ್ರಜಾಪ್ರಭುತ್ವದಲ್ಲಿ ಟೀಕೆಗಳು ಸಹಜ. ಆದರೆ ಅದಕ್ಕೆ ತಲೆಕೆಡಿಸಿಕೊಳ್ಳದೆ, ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಆಡಳಿತ ನಡೆಸುವುದಾಗಿ ಹೇಳಿದರು. ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಕುರಿತ ಚರ್ಚೆಗಾಗಿ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ. ಇದನ್ನು ಬೇರೆ ರೀತಿ ಅರ್ಥೈಸಿಕೊಳ್ಳುವುದೇಕೆ ? ಹರಗಣಗಳ ಬಗ್ಗೆ ಚರ್ಚಿಸಲು ಅಧಿವೇಶನ ಕರೆಯುವುದಾಗಿ ಹೇಳಿದ್ದು ನಿಜ. ಈಗಲೂ ಕಾಲ ಮಿಂಚಿಲ್ಲ. ನಾಳೆ ವಿಧಾನಮಂಡಲ ವ್ಯವಹಾರಗಳ ಸಲಹಾ ಸಮಿತಿ ನಡೆಯಲಿದ್ದು, ಯಾವ ಯಾವ ವಿಷಯಗಳ ಬಗ್ಗೆ ಚರ್ಚೆ ನಡೆಯಬೇಕೆಂದು ಸಲಹೆಗಳನ್ನು ಸ್ಪೀಕರ್ ಮುಂದಿಡಲಿ ಎಂದು ಯಡಿಯೂರಪ್ಪ ಹೇಳಿದರು.
ವಿಷಯಗಳ ಚರ್ಚೆಗೆ ಮೂರು ದಿನ ಸಾಲದಿದ್ದರೆ ಸ್ಪೀಕರ್ ಸಲಹೆ ಮೇರೆಗೆ ಇನ್ನೂ ಹೆಚ್ಚು ಕಾಲ ಅಧಿವೇಶನ ನಡೆಸಲು ತಾವು ಸಿದ್ದ. ವರ್ಷದಲ್ಲಿ 60 ದಿನಗಳ ಕಾಲ ಅಧಿವೇಶನ ನಡೆಸಬೇಕೆಂಬ ವಿಷಯದಲ್ಲಿ ಎರಡು ಮಾತಿಲ್ಲ. ತಮ್ಮ ಅಧಿಕಾರಾವಧಿಯಲ್ಲಿ ಕಡ್ಡಾಯವಾಗಿ 60 ದಿನ ಅಧಿವೇಶನ ನಡೆಯಲಿದೆ. ಇದರಲ್ಲಿ ಯಾರಿಗೂ ಅನುಮಾನ ಬೇಡ ಎಂದು ಅವರು ಹೇಳಿದರು.
ಸುಧಾಕರ್ ರಾಜೀನಾಮೆಗೆ ಕ್ಷಣಗಣನೆ...
ರಾಷ್ಟ್ರೀಕೃತ ಬ್ಯಾಂಕೊಂದಕ್ಕೆ ವಂಚನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಡಿ ಸುಧಾಕರ್ ಅವರಿಗೆ ನೀಡಿದ್ದ ಅವಧಿ ಕೊನೆಗೊಂಡಿದ್ದು, ಇಂದು ರಾತ್ರಿ ವೇಳೆಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ಚೀನಾದಿಂದ ಆಗಮಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಸುಧಾಕರ್, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪತ್ರವನ್ನು ಈಗಾಗಲೇ ಮುಖ್ಯಮಂತ್ರಿಗಳ ಕೈಗೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆದರೆ, ಆರೋಪಪಟ್ಟಿಯನ್ನು ವಜಾಗೊಳಿಸುವಂತೆ ಕೋರಿ ಸಚಿವ ಸುಧಾಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಹೈಕೋರ್ಟ್ ಏಕಸದಸ್ಯ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಒಂದು ವಾರಗಳ ಕಾಲ ವಿಚಾರಣೆ ಮುಂದೂಡಿದೆ. ಸಚಿವ ಸುಧಾಕರ್ ವಿರುದ್ಧ ಸಿಬಿಐ ಆರೋಪಪಟ್ಟಿ ಸಲ್ಲಿಸಿತ್ತು.
(ದಟ್ಸ್ ಕನ್ನಡ ವಾರ್ತೆ)
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications