ಕೇಂದ್ರ ನೌಕರರಿಗೆ ಶೇ.5 ರಷ್ಟು ತುಟ್ಟಿ ಭತ್ಯೆ ಹೆಚ್ಚಳ
ನವದೆಹಲಿ,
ಸೆ. 10 : ದೇಶದಲ್ಲಿ ಬರಗಾಲ ಮತ್ತು ಆರ್ಥಿಕ ಕುಸಿತ ಇದ್ದಾಗಲೂ ಕೇಂದ್ರ ಸರಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಶೇ.5 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡುವ ತೀರ್ಮಾನವನ್ನು ಕೇಂದ್ರ ಸರಕಾರ ಕೈಗೊಂಡಿದೆ. ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಎಂಟು ಲಕ್ಷ ಕೇಂದ್ರ ಸರಕಾರಿ ನೌಕರರು ಇದರ ಸದುಪಯೋಗ ಪಡೆದುಕೊಳ್ಳಲಿದ್ದಾರೆ. id="toptextpromo">ಸಚಿವ
ಸಂಪುಟ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ, ಕೇಂದ್ರ ವಾರ್ತಾ ಹಾಗೂ ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ, ಇದೇ ವರ್ಷದ ಜುಲೈ ತಿಂಗಳಿನಿಂದ ಜಾರಿಗೆ ಬರುವಂತೆ ಕೇಂದ್ರ ಸರಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಶೇ.5 ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಿಸಲಾಗಿದೆ. ಇದರಿಂದ ಸರಕಾರದ ಬೊಕ್ಕಸಕ್ಕೆ ಪ್ರತಿವರ್ಷ 2,904 ಕೋಟಿ ರುಪಾಯಿ ಹೊರೆ ಬೀಳಲಿದೆ ಎಂದು ಸೋನಿ ವಿವರಿಸಿದರು. id='are-slot-1' class='oiad oi-axt oiadv'> id='top-searched-articles'>(ಏಜನ್ಸೀಸ್)












Click it and Unblock the Notifications