ಕಂಟೋನ್ಮೆಂಟಿನಲ್ಲಿ ಕನ್ನಡ ಡಿಂಡಿಮ!

ಅಂದು ಬೆಳಿಗ್ಗೆ 9.30ಗಂಟೆಗೆ ವಸಂತನಗರ ವೃತ್ತದಲ್ಲಿ ನೂತನ ಒಕ್ಕೂಟದ ಧ್ವಜ ಸ್ತಂಭವನ್ನು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮತ್ತು ಮುಜರಾಯಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಎನ್. ಕೃಷ್ಣಯ್ಯ ಶೆಟ್ಟಿ ಅವರು ನೆರವೇರಿಸುವರು. ಅಪರಾಹ್ನ 2.30ಕ್ಕೆ ಮೆರವಣಿಗೆಯಲ್ಲಿ ಜಾನಪದ ಕಲಾ ತಂಡಗಳು ನಗರದ ವಿವಿಧ ಕನ್ನಡ ಪರ ಸಂಘಟನೆಗಳು ಭಾಗವಹಿಸಲಿದ್ದು ಕಾಚರಕನಹಳ್ಳಿ, ಆರ್.ಟಿ. ನಗರ, ಶಿವಾಜಿನಗರ ಪ್ರದೇಶಗಳಿಂದ ಮೆರವಣಿಗೆ ಹೊರಟು ಅಂಬೇಡ್ಕರ್ ಭವನ ತಲುಪಲಿವೆ.
ಸಂಜೆ 4.30 ಸುಮಾರಿಗೆ ಸಮ್ಮೇಳನವನ್ನು ಹಿರಿಯ ಸಂಶೋಧಕ ಡಾ.ಎಂ. ಚಿದಾನಂದ ಮೂರ್ತಿ ಉದ್ಘಾಟಿಸಲಿದ್ದಾರೆ.ಅಬಕಾರಿ ಮತ್ತು ವಾರ್ತಾ ಸಚಿವ ಕಟ್ಟಾಸುಬ್ರಮಣ್ಯನಾಯ್ಡು ಅವರು "ದಂಡು ಡಿಂಡಿಮ" ಸ್ಮರಣ ಸಂಚಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಅವರು "ಕನ್ನಡ ಕಹಳೆ" ಕವಿತಾ ಸಂಕಲನವನ್ನು ಬಿಡುಗಡೆ ಮಾಡಲಿದ್ದಾರೆ. ಸಂಜೆ 5.30ಗೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆ ಕಾರ್ಯದರ್ಶಿ ಬಿ.ಆರ್. ಜಯರಾಮರಾಜೇ ಅರಸ್ ಅವರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮಾಡಲಿದ್ದಾರೆ.
ಕನ್ನಡಕ್ಕೋಸ್ಕರ ನಾನಾ ಊರು, ಕೇರಿ, ತಾಲೂಕು, ಜಿಲ್ಲೆ, ದೇಶವಿದೇಶಗಳಲ್ಲಿ ಸಮ್ಮಳನಗಳು ನಡೆಯುವುದು ರೂಢಿ. ಆದರೆ, ಬೆಂಗಳೂರಿನಂಥ ನಗರದ ಒಂದು ಬಡಾವಣೆಯಲ್ಲಿ ಕನ್ನಡ ಸಮ್ಮೇಳನ ನಡೆಯುತ್ತಿದೆ ಎಂದರೆ ಬೆರಳು ಮೂಗಿನ ತುದಿಗೆ ಹೋಗುತ್ತದೆ. ವಿಶೇಷವಾಗಿ ಎಲ್ಲಿ ಕನ್ನಡ ಕಾಣೆಯಾಗಿದೆಯೋ ಅಲ್ಲಿ ಕನ್ನಡತನವನ್ನು ಪ್ರತಿಷ್ಠಾಪಿಸುವ ಕೈಕಂಕರ್ಯಕ್ಕೆ ಸ್ಥಳೀಯರು ಮುಂದಾಗಿರುವ ಸಂಗತಿ ಗೋಚರಿಸುತ್ತಿದೆ. ಗಾಂಧೀಬಜಾರ್, ಚಾಮರಾಜಪೇಟೆ, ಗವೀಪುರಂ, ಮಲ್ಲೇಶ್ವರ,ಜಯನಗರ ಮುಂತಾದ ಕನ್ನಡದಟ್ಟಣೆಯ ಪ್ರದೇಶದ ಹುಡುಗರು ಜಾಸ್ತಿ ಇಂಗ್ಲಿಷ್ ಮಾತಾಡುವ ಡಿಂಗೋ ಜಾತಿಯ ಹುಡುಗ, ಹುಡುಗಿಯರಿಗೆ ಕಂಟ್ರಮೆಂಟ್ ಎಂದು ಕರೆಯುತ್ತಾರೆ. ಇಂಥ ಕಂಟೋನ್ ಮೆಂಟ್ ಪ್ರದೇಶದಲ್ಲಿ ಕನ್ನಡ ಸಮ್ಮೇಳನ ವ್ಯವಸ್ಥೆಯಾಗಿರುವುದು ಬಾಡುವ ಕನ್ನಡ ಗಿಡಕ್ಕೆ ಸಗಣಿಗೊಬ್ಬರ ಸಿಂಪಡಿಸುವ ಪ್ರಯತ್ನವೆಂದು ತೋರುತ್ತದೆ.
ಅಂತೆಯೇ, ಬೆಳಗಾವಿ ಮತ್ತಿತರ ಪ್ರದೇಶಗಳಲ್ಲೂ ಕಂಟೋನ್ಮೆಂಟ್ ಗಳಿವೆ. ಅಷ್ಟು ದೂರ ಯಾಕೆ, ಇಂದಿರಾನಗರ ಮಾರತ್ ಹಳ್ಳಿ ಇಲೆಕ್ಟ್ರಾನಿಕ್ ಸಿಟಿ ಮತ್ತು ನಾವು ಕಂಡುಕೇಳರಿಯದ ಬೆಂಗಳೂರಿನ ಹೊಸಹೊಸಹೊಸ ಬಡಾವಣೆಗಳಲ್ಲಿ ಇಂಥ ಕನ್ನಡ ಪ್ರಜ್ಞೆಯ ಬೀಜಗಳನ್ನು ಆಗಾಗ ಬಿತ್ತುತ್ತಿದ್ದರೆ ಒಳಿತು. ಸಮ್ಮೇಳನ ಒಂದು ನೆಪ ಅಷ್ಟೆ.
(ದಟ್ಸ್ ಕನ್ನಡ ವಾರ್ತೆ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications