ಸೆ. 12 : ಜಸ್ವಂತ್ ಸಿಂಗ್ ವಿವಾದಿತ ಕೃತಿ ರಿಲೀಸ್

ಕೃತಿ ಬರೆದು ಬಿಜೆಪಿಯಿಂದ ಉಚ್ಚಾಟನೆಗೊಂಡ ನಂತರವೂ ತಮ್ಮ ನಿಲುವನ್ನು ಬದಲಿಸಿಕೊಳ್ಳದಿರುವ ಬಗ್ಗೆ ಜಸ್ವಂತ್ ಸಿಂಗ್ ಸುದೀರ್ಘವಾಗಿ ಮಾತನಾಡಲಿದ್ದಾರೆ. ಪುಸ್ತಕಕ್ಕೆ ಸಂಬಂಧಿಸಿದಂತೆ ಅನೇಕ ಮಹತ್ವದ ಸಂಗತಿಗಳನ್ನು ಸಿಂಗ್ ಮುಕ್ತವಾಗಿ ಹಂಚಿಕೊಳ್ಳಲಿದ್ದಾರೆ. ಹಿರಿಯ ಪತ್ರಕರ್ತ ಎಂಜೆ ಅಕ್ಬರ್, ನಿವೃತ್ತ ಏರ್ ಮಾರ್ಷಲ್ ಕೆಸಿ ನಂದಕಾರ್ಯಪ್ಪ ಸೇರಿದಂತೆ ಕನ್ನಡದ ಅನೇಕ ಸಾಹಿತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಜಿನ್ನಾ ಇಂಡಿಯಾ ಇಂಡಿಪೆಂಡೆನ್ಸ್ ಪುಸ್ತಕದಲ್ಲಿ ಪಾಕಿಸ್ತಾನದ ಪಿತಾಮಹ ಮೊಹ್ಮದ್ ಅಲಿ ಜಿನ್ನಾ ಅವರನ್ನು ಪ್ರಶಂಸಿಸಲಾಗಿದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಹಾಗೂ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರು ಅವರನ್ನು ಟೀಕಿಸಲಾಗಿದೆ. ಅಲ್ಲದೇ ಅಖಂಡ ಭಾರತ ವಿಭಜನೆಯಾಗಲು ಈ ಇಬ್ಬರು ನಾಯಕರು ಕಾರಣ. ಜಿನ್ನಾ ಅವರಿಗೆ ದೇಶದ ವಿಭಜನೆ ಮಾಡುವ ಉದ್ದೇಶ ಇರಲಿಲ್ಲ ಎಂಬ ಸಂಗತಿ ಪುಸ್ತಕದಲ್ಲಿದ್ದರಿಂದ ಬಿಜೆಪಿಯಲ್ಲಿ ದೊಡ್ಡ ಸಂಚಲನವನ್ನು ಉಂಟು ಮಾಡಿದ ಕೃತಿ ಇದೆ.
ಇದೇ ಕಾರಣಕ್ಕೆ ಪಕ್ಷದ ತತ್ತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂಬ ಕಾರಣಕ್ಕೆ ಜಸ್ವಂತ್ ಸಿಂಗ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಲಾಗಿದೆ. ಸರ್ದಾರ್ ವಲ್ಲಭಬಾಯಿ ಪಟೇಲ್ ಅವರನ್ನು ಟೀಕಿಸಲಾಗಿದೆ ಎನ್ನುವ ನೆಪವಿಟ್ಟುಕೊಂಡು ಗುಜರಾತ್ ನಲ್ಲಿ ಪುಸ್ತಕ ನಿಷೇಧಕ್ಕೆ ಆದೇಶ ಹೊರಡಿಸಿದ್ದರು. ನಂತರ ಸುಪ್ರಿಂಕೋರ್ಟ್ ಸರಕಾರದ ನಿಷೇಧವನ್ನು ವಜಾಗೊಳಿಸಿದೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ಮಾತ್ರ ಅಂತಹ ಸಾಹಸ ಕೈಹಾಕಲಿಲ್ಲ. ನಾಳೆ ಬಿಡುವಾದರೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕರೆ ಖಂಡಿತಾ ಮಿಸ್ ಮಾಡಿಕೊಳ್ಳಬೇಡಿ. ಸ್ಥಳ : ಲೀಲಾ ಪ್ಯಾಲೇಸ್ ಶ್ರೀಮಂತರ ಹೋಟೆಲ್ ನಲ್ಲಿ ಬಿಡುಗಡೆ ಕಾರ್ಯಕ್ರಮವಿದೆ.
(ದಟ್ಸ್ ಕನ್ನಡ ವಾರ್ತೆ)
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications