ಬಿಜೆಪಿ ವಿರುದ್ಧ ಕಾನೂನು ಸಮರ: ದೇವೇಗೌಡ

ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು. ಚರ್ಚ್ ದಾಳಿಯನ್ನು ಸಿಓಡಿ ತನಿಖೆಗೆ ಒಪ್ಪಿಸುವುದಾಗಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈಗ ಸಿಓಡಿಯಲ್ಲಿ ದಕ್ಷ ಅಧಿಕಾರಿಗಳಿಲ್ಲ. ಆದ ಕಾರಣ ಚರ್ಚ್ ದಾಳಿಯನ್ನು ಸಿಬಿಐಗೆ ಒಪ್ಪಿಸುವುದು ಸೂಕ್ತ ಎಂದರು.
ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಶಿಕ್ಷಿಸಿ ಎಂದು ವಿಧಾನಸಭೆಯಲ್ಲಿ ವಿರೋಧ ಪಕ್ಷದ ಸದಸ್ಯರು ಹೇಳಿರುವುದು ಹಾಸ್ಯಾಸ್ಪದವಾಗಿದೆ ಎಂದು ದೇವೇಗೌಡರು ವ್ಯಂಗವಾಡಿದರು. ಚರ್ಚ್ ದಾಳಿಗೆ ಸಂಬಂಧಿಸಿದಂತೆ ಕೇಂದ್ರದ ಮಾಜಿ ಸಚಿವ ಅನಂತಕುಮಾರ್ ನೀಡಿರುವ ಹೇಳಿಕೆ ಅವರ ವ್ಯಕ್ತಿತ್ವಕ್ಕೆ ಭೂಷಣವಲ್ಲ ಎಂದು ಟೀಕಿಸಿದರು.
ಬಿಜೆಪಿ ವಿರುದ್ಧ ಕಾನೂನು ಸಮರ
ಚಿಕ್ಕಮಗಳೂರಿನ ವಿವಾದಿತ ಬಾಬಾಬುಡನ್ ಗಿರಿ ಮತ್ತು ದತ್ತಪೀಠಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿರುವ ಮಧ್ಯಂತರ ಆದೇಶವನ್ನು ಬಿಜೆಪಿ ಸಚಿವರು ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕ್ರಮ ಕೈಗೊಳ್ಳದಿದ್ದ ಪಕ್ಷದಲ್ಲಿ ಬಿಜೆಪಿ ವಿರುದ್ಧ ತಾವು ಕಾನೂನು ಸಮರ ಸಾರುವುದಾಗಿ ಎಚ್ಚರಿಸಿದರು.
ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡ ಅವರು ಸೆಪ್ಟೆಂಬರ್ 8ರಂದು ವಿವಾದಿತ ಪ್ರದೇಶದಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಪೂಜೆ ಮಾಡಿದ್ದಾರೆ. ಇದನ್ನು ತಾವು ಖಂಡಿಸುತ್ತೇವೆ. ಒಂದೆಡೆ ಮುಸ್ಲಿಮರ ಮೇಲೆ ದಾಳಿ, ಮತ್ತೊಂದೆಡೆ ಚರ್ಚ್ ಒಡೆಯುವುದು. ಕೋಮು ಸಾಮರಸ್ಯ ಎಲ್ಲಿದೆ? ಶಾಂತಿ, ನೆಮ್ಮದಿ ಇಲ್ಲದೆ ಸಹಬಾಳ್ವೆ ಸಾಧ್ಯವಿಲ್ಲ ಎಂದು ಗೌಡರು ಗುಡುಗಿದರು.
2006ರ ಹೈಕೋರ್ಟ್ ಆದೇಶವನ್ನು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೋಡಿದ್ದಾರೋ ಇಲ್ಲವೋ ಗೊತ್ತಿಲ್ಲ. ಸರಕಾರಕ್ಕೆ ಹೆದರಿಕೊಂಡು, ಮಾನ ಮರ್ಯಾದೆ ಬಿಟ್ಟು ಅವರು ಕೆಲಸ ಮಾಡುವ ಬದಲು ಮನೆಗೆ ಹೋಗುವುದು ಉತ್ತಮ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ರಾಜ್ಯಪಾಲರು ಹೇಳಿರುವುದರಲ್ಲಿ ನೂರಕ್ಕೆ ನೂರರಷ್ಟು ಸತ್ಯಾಂಶವಿದೆ ಎಂದು ಹೇಳಿದರು.
(ದಟ್ಸ್ ಕನ್ನಡ ವಾರ್ತೆ)
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications