ಕೃಷಿ ಯುವ ಪೀಳಿಗೆಯನ್ನು ಆಕರ್ಷಿಸಲಿ: ಸಿದ್ದು

ರಾಜ್ಯದ 20 ಜಿಲ್ಲೆಗಳಲ್ಲಿ ಬರ ಇದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಒದಗಿಸುವ ಅನಿವಾರ್ಯತೆ ಒದಗಿದೆ. ಮಳೆಯ ಅಭಾವದಿಂದಾಗಿ 13 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿಲ್ಲ. ಅವೈಜ್ಞಾನಿಕ ಕೃಷಿ ಪದ್ಧತಿಯಿಂದ 20 ಲಕ್ಷ ಹೆಕ್ಟೇರ್ ನಷ್ಟು ಭೂಮಿ ನಿರುಪಯುಕ್ತವಾಗಿದೆ ಎಂದು ಅವರು ತಿಳಿಸಿದರು. ಹಾಗಾಗಿ ಈ ವರ್ಷದ ಆಹಾರ ಉತ್ಪಾದನೆಯಲ್ಲಿ ಶೇ.20ರಷ್ಟು ಕಡಿಮೆಯಾಗಿದೆ.
ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಏರಿಕೆಯಾಗುತ್ತಿಲ್ಲ. ಇದನ್ನು ಹೆಚ್ಚಿಸುವ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳು ಕಷ್ಟಕರವಾಗಲಿದೆ ಎಂದು ಅವರು ಸಭೆಗೆ ತಿಳಿಸಿದರು. ಯುವ ಪೀಳಿಗೆಗೆ ಬೇಸಾಯವನ್ನು ಆಕರ್ಷಕ ಹಾಗೂ ಲಾಭದಾಯಕ ಅನ್ನಿಸುವ ರೀತಿಯಲ್ಲಿ ಮಾಡಬೇಕಾಗಿದೆ. ಆಗ ಕೃಷಿಯನ್ನು ನೆಚ್ಚಿಕೊಳ್ಳುವ ಧೈರ್ಯ ಮಾಡುತ್ತಾರೆ. ಇಲ್ಲದೆ ಹೋದರೆ ನಗರಗಳಿಗೆ ವಲಸೆ ಬರುವುದನ್ನು ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications