ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲ: ಸಾಂಗ್ಲಿಯಾನಾ
ಬೆಂಗಳೂರು, ಸೆ. 13 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದ್ದು, ಅಲ್ಪಸಂಖ್ಯಾತರಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಮಾಜಿ ಸಂಸದ ಎಚ್.ಟಿ. ಸಾಂಗ್ಲಿಯಾನಾ ಆರೋಪಿಸಿದರು.
ಚರ್ಚ್ ಮೇಲಿನ ದಾಳಿ ಮತ್ತೆ ಮುಂದುವರಿದಿದ್ದು, ಅಲ್ಪಸಂಖ್ಯಾತರ ಸ್ವತ್ತು, ಜೀವಕ್ಕೆ ರಕ್ಷಣೆ ಇಲ್ಲವೆಂಬ ಭಾವನೆ ಬಲವಾಗುತ್ತಿದೆ. ರಾಜ್ಯ ಸರಕಾರ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಲು ವಿಫಲವಾಗಿದೆ' ಎಂದು ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಆರೋಪಿಸಿದರು.
ವರ್ಷದ ಹಿಂದೆ ನಡೆದ ಚರ್ಚ್ ದಾಳಿಗೆ ಕಾರಣರಾದವರ ಮೇಲೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತು ನ್ಯಾಯಮೂರ್ತಿ ಸೋಮಶೇಖರ್ ಆಯೋಗ ರಚಿಸಲಾಗಿದ್ದರೂ, ಇದುವರೆಗೆ ಆರೋಪಿಗಳನ್ನು ಪತ್ತೆ ಮಾಡಿಲ್ಲ. ಘಟನೆಯ ಹಿಂದಿರುವ ಶಕ್ತಿಗಳಿಗೆ ಸರಕಾರ ಕುಮ್ಮಕ್ಕು ನೀಡುತ್ತಿದೆ. ಅಪರಾಧ ಕೃತ್ಯ ನಡೆಸುವವರ ಮೇಲೆ ಗುಂಡಿನ ದಾಳಿ ನಡೆಸುವಂತೆ ಆದೇಶ ನೀಡಿರುವುದು ಸರಿಯಲ್ಲ. ಇಂತಹ ಸನ್ನಿವೇಶಗಳಲ್ಲಿ ಯಾವಾಗಲೂ ಅಮಾಯಕರೇ ಬಲಿಯಾಗುತ್ತಾರೆ'ಎಂದರು.
ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ರಾಜಕೀಯ ಇಚ್ಛಾಶಕ್ತಿ ಸರಕಾರಕ್ಕಿಲ್ಲ. ದೇವಾಲಯಗಳ ದುರಸ್ತಿಗೆ 100 ಕೋಟಿ ರೂ. ನೀಡಿರುವ ಸರಕಾರಕ್ಕೆ ಅಪರಾಧಿಗಳ ಪತ್ತೆಗೆ ಕೋಟಿ ರೂ.ವೆಚ್ಚ ಮಾಡಲು ಮನಸಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ ಕಾವಿಧಾರಿಗಳು ಮನೆಮನೆಗೆ ತೆರಳಿ ಕ್ರೈಸ್ತ ಧರ್ಮದ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ'ಎಂದು ಬೆನೆಡಿಕ್ಟ್ ಬಾಲು ಆಪಾದಿಸಿದರು. ಹೆಬ್ಬಗೋಡಿ ಚರ್ಚ್ನ ಮೇಲಿನ ದಾಳಿ ಪ್ರಕರಣವನ್ನು ಸಿಐಡಿಗೆ ವಹಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕ್ರಮವನ್ನು ಅಖಿಲ ಕರ್ನಾಟಕ ಕೆಥೋಲಿಕ್ ಕ್ರೈಸ್ತರ ಕನ್ನಡ ಸಂಘ ಸ್ವಾಗತಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications