ಬೆಂಗಳೂರಿನಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ

ರಾತ್ರಿ ಸುರಿದ ಮಳೆಯಿಂದಾಗಿ ಮೈಸೂರು ರಸ್ತೆಯಲ್ಲಿರುವ ನಾಯಂಡಹಳ್ಳಿಯಲ್ಲಿರುವ ಮನೆಗಳು ಜಲಾವೃತವಾಗಿದ್ದರಿಂದ ಜನರು ಸರಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶಾಸಕ ಎಂ ಶ್ರಿನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಕೂಡಲೇ ನಾಯಂಡಹಳ್ಳಿ ಮತ್ತಿತರ ಹಿಂದುಳಿದ ಪ್ರದೇಶಗಳಿಗೆ ಮೂಲಭೂತ ಸೌಕರ್ಯಗಳನ್ನು ನೀಡುವಂತೆ ಒತ್ತಾಯಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿಯೂ ಭಾರಿ ಮಳೆ ಸುರಿದಿದ್ದು, ಬೆಳೆದು ನಿಂತ ಬೆಳೆ ನೀರು ಪಾಲಾಗಿದೆ. ರೈತಾಪಿ ವರ್ಗದ ಕಡೆಗೆ ಸರಕಾರ ಕಣ್ಣು ಹಾಯಿಸಿದಿರುವುದು ರೈತರಲ್ಲಿ ಆತಂಕ ಮನೆಮಾಡಿದೆ. ಜಿಲ್ಲಾಧಿಕಾರಿಗಳ ವಿರುದ್ದ ತೀವ್ರ ಆಕ್ರೋಷ ವ್ಯಕ್ತಪಡಿಸುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications