ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಕ್ಯಾನ್ಸರ್ ನಿಂದ ಬಳಲುತ್ತಿರುವ ಎಂಪಿ ಪ್ರಕಾಶ್
ದೇಶದ ಪ್ರಸಿದ್ಧ ಕ್ಯಾನ್ಸರ್ ರೋಗದ ತಜ್ಞ ಡಾ ಶೇಖರ್ ಪಾಟೀಲ್ ಅವರು ಪ್ರಕಾಶ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆರಂಭದಲ್ಲಿ ಕರುಳಿನ ಕ್ಯಾನ್ಸರ್ ಎಂದು ತಿಳಿದ ತಕ್ಷಣ ಚಿಕಿತ್ಸೆ ನೀಡಲಾಗಿತ್ತು. ಆದರೆ, ಸಣ್ಣಕರುಳಿನಲ್ಲಿ ಚಿಕ್ಕ ಚಿಕ್ಕ ಹುಣ್ಣುಗಳಾಗುತ್ತಿದ್ದರಿಂದ ಕಿಮೋಥೇರಪಿ ಚಿಕಿತ್ಸೆಯನ್ನು ಆರಂಭಿಸಲಾಗಿದೆ. ಸೋಮವಾರ ಮಣಿಪಾಲ್ ಆಸ್ಪತ್ರೆಯಲ್ಲಿ ಒಂದು ಸುತ್ತಿನ ಸಂಪೂರ್ಣ ಪರೀಕ್ಷೆ ನಡೆಸಿ ಅಗತ್ಯ ಬಿದ್ದರೆ ಶಸ್ತ್ರಚಿಕಿತ್ಸೆ ಮಾಡುವ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪಾಟೀಲ್ ಹೇಳಿದರು. ಸದ್ಯ ಬೆಂಗಳೂರಿನಲ್ಲಿರುವ ಅವರ ಮಗಳ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ.
(ದಟ್ಸ್ ಕನ್ನಡ ವಾರ್ತೆ)
Comments
Story first published: Monday, September 14, 2009, 12:25 [IST]