ಶಿವಮೊಗ್ಗದಲ್ಲಿ ರಸ್ತೆ ಅಗಲೀಕರಣಕ್ಕೆ ನಿವಾಸಿಗಳ ವಿರೋಧ

ಸವಾರ್ಲೈನ್ ರಸ್ತೆಯ ಎರಡೂ ಬದಿಗಳಲ್ಲಿ ಸುಮಾರು 300ರಷ್ಟು ಕುಟುಂಬಗಳು ವಾಸವಾಗಿದ್ದು, ಹೂ ಮಾರಾಟ ಮತ್ತು ತಳ್ಳುಗಾಡಿಗಳನ್ನು ನಡೆಸಿ ಜೀವನ ನಡೆಸುವ ಕುಟುಂಬಗಳು ಇಲ್ಲಿವೆ. ಒಂದು ವೇಳೆ ಇಲ್ಲಿನ ನಿವಾಸಿಗಳನ್ನು ಒಕ್ಕಲೆಬ್ಬಿಸಿದಲ್ಲಿ ವಾಸಕ್ಕೆ ಯಾವುದೇ ಸ್ಥಳ ಸಿಗದೆ ಜೀವನ ನಡೆಸಲು ಕಷ್ಟಕರವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸವಾರ್ಲೈನ್ ರಸ್ತೆಯಲ್ಲಿ ಅಗಲೀಕರಣ ಮಾಡುವ ಅವಶ್ಯಕತೆ ಪ್ರಸ್ತುತ ಇರುವುದಿಲ್ಲ. ಸವಾರ್ಲೈನ್ ರಸ್ತೆಗೆ ಸಮಾನಾಂತರವಾಗಿ ಜೆಪಿಎನ್ ರಸ್ತೆ ಇರುತ್ತದೆ. ಹಾಗೆಯೇ, ನಗರದ ಬೇರೆ ಪ್ರದೇಶಗಳಿಗೆ ಹೋಗಲು ಹಲವಾರು ರಸ್ತೆಗಳಿವೆ. ಜೊತೆಗೆ, ಬಿ.ಹೆಚ್.ರಸ್ತೆಯಲ್ಲಿ ಕಾಮಗಾರಿಯಾಗುತ್ತಿರುವುದರಿಂದ ಸವಾರ್ಲೈನ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಹೆಚ್ಚಾಗಿದೆಯೇ ಹೊರತು ಇಲ್ಲಿ ದಿನನಿತ್ಯ ದೊಡ್ಡ ವಾಹನಗಳ ಸಂಚಾರ ಕಂಡುಬರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಹಾಲಿ ಸವಾರ್ಲೈನ್ ರಸ್ತೆಯನ್ನು ನಗರವಾಸಿಗಳು ಮಾತ್ರ ಬಳಸುವ ಅವಶ್ಯಕತೆ ಇರುತ್ತದೆ. ಸವಾರ್ಲೈನ್ ರಸ್ತೆಯ ಮೂಲಕ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಲ್ಲಿ, ಸವಾರ್ಲೈನ್ ಮತ್ತು ನೆಹರೂ ರಸ್ತೆ ಸಂದಿಸುವ ಗೋಪಿವೃತ್ತದ ಬಳಿ ಟ್ರಾಫಿಕ್ ಜಾಮ್ ಹಾಗೂ ಅಪಘಾತಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಅಭಿವೃದ್ಧಿ ನೆಪದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿರುವ ಮನೆಗಳನ್ನು ಒಡೆದುಹಾಕಿದಲ್ಲಿ, ಕಡು ಬಡತನದಲ್ಲಿರುವ 300 ಕುಟುಂಬಗಳು ಬೀದಿಗೆ ಬೀಳುವುದು ನಿಶ್ಚಿತವಾಗಿದೆ. ಹಲವಾರು ವರ್ಷಗಳಿಂದ ಕಡುಬಡ ಕುಟುಂಬಗಳು ಕಷ್ಟಪಟ್ಟು ಜೀವನದಲ್ಲಿ ಮೇಲೆ ಬರುತ್ತಿರುವ ಸಂದರ್ಭದಲ್ಲಿ ರಸ್ತೆ ಅಗಲೀಕರಣ ಮಾಡಿದರೆ ಬಡ ಕುಟುಂಬಗಳು ಇನ್ನಷ್ಟು ಕಷ್ಟದ ಪರಿಸ್ಥಿತಿಗೆ ಹೋಗಬೇಕಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.
ಹೀಗಾಗಿ, ಬಡಜನರ ಕಾಳಜಿಯುಳ್ಳ ಅಧಿಕಾರಿಗಳಾದ ತಾವುಗಳು ಸವಾರ್ಲೈನ್ ರಸ್ತೆಯ ಅಗಲೀಕರಣವನ್ನು ಕೈಬಿಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಪ್ರತಿಭಟನಾನಿರತರು ಒಕ್ಕೊರಲಿನಿಂದ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಆರ್.ಶಿವಕುಮಾರ್, ಬಾಲರಾಜ್, ಕೃಷ್ಣಮೂರ್ತಿ, ಮಂಜುನಾಥ್, ರಂಗಸ್ವಾಮಿ, ರಘು, ಮಧು, ರಮೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications