ಶಿವಮೊಗ್ಗದಲ್ಲಿ ರಸ್ತೆ ಅಗಲೀಕರಣಕ್ಕೆ ನಿವಾಸಿಗಳ ವಿರೋಧ

ಸವಾರ್ಲೈನ್ ರಸ್ತೆಯ ಎರಡೂ ಬದಿಗಳಲ್ಲಿ ಸುಮಾರು 300ರಷ್ಟು ಕುಟುಂಬಗಳು ವಾಸವಾಗಿದ್ದು, ಹೂ ಮಾರಾಟ ಮತ್ತು ತಳ್ಳುಗಾಡಿಗಳನ್ನು ನಡೆಸಿ ಜೀವನ ನಡೆಸುವ ಕುಟುಂಬಗಳು ಇಲ್ಲಿವೆ. ಒಂದು ವೇಳೆ ಇಲ್ಲಿನ ನಿವಾಸಿಗಳನ್ನು ಒಕ್ಕಲೆಬ್ಬಿಸಿದಲ್ಲಿ ವಾಸಕ್ಕೆ ಯಾವುದೇ ಸ್ಥಳ ಸಿಗದೆ ಜೀವನ ನಡೆಸಲು ಕಷ್ಟಕರವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸವಾರ್ಲೈನ್ ರಸ್ತೆಯಲ್ಲಿ ಅಗಲೀಕರಣ ಮಾಡುವ ಅವಶ್ಯಕತೆ ಪ್ರಸ್ತುತ ಇರುವುದಿಲ್ಲ. ಸವಾರ್ಲೈನ್ ರಸ್ತೆಗೆ ಸಮಾನಾಂತರವಾಗಿ ಜೆಪಿಎನ್ ರಸ್ತೆ ಇರುತ್ತದೆ. ಹಾಗೆಯೇ, ನಗರದ ಬೇರೆ ಪ್ರದೇಶಗಳಿಗೆ ಹೋಗಲು ಹಲವಾರು ರಸ್ತೆಗಳಿವೆ. ಜೊತೆಗೆ, ಬಿ.ಹೆಚ್.ರಸ್ತೆಯಲ್ಲಿ ಕಾಮಗಾರಿಯಾಗುತ್ತಿರುವುದರಿಂದ ಸವಾರ್ಲೈನ್ ರಸ್ತೆಯಲ್ಲಿ ವಾಹನ ಸಂಚಾರ ತಾತ್ಕಾಲಿಕವಾಗಿ ಹೆಚ್ಚಾಗಿದೆಯೇ ಹೊರತು ಇಲ್ಲಿ ದಿನನಿತ್ಯ ದೊಡ್ಡ ವಾಹನಗಳ ಸಂಚಾರ ಕಂಡುಬರುವುದಿಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಹಾಲಿ ಸವಾರ್ಲೈನ್ ರಸ್ತೆಯನ್ನು ನಗರವಾಸಿಗಳು ಮಾತ್ರ ಬಳಸುವ ಅವಶ್ಯಕತೆ ಇರುತ್ತದೆ. ಸವಾರ್ಲೈನ್ ರಸ್ತೆಯ ಮೂಲಕ ಭಾರೀ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟಲ್ಲಿ, ಸವಾರ್ಲೈನ್ ಮತ್ತು ನೆಹರೂ ರಸ್ತೆ ಸಂದಿಸುವ ಗೋಪಿವೃತ್ತದ ಬಳಿ ಟ್ರಾಫಿಕ್ ಜಾಮ್ ಹಾಗೂ ಅಪಘಾತಗಳಿಗೆ ಅವಕಾಶ ಮಾಡಿಕೊಟ್ಟಂತಾಗುತ್ತದೆ. ಅಭಿವೃದ್ಧಿ ನೆಪದಲ್ಲಿ ರಸ್ತೆಯ ಎರಡೂ ಬದಿಗಳಲ್ಲಿರುವ ಮನೆಗಳನ್ನು ಒಡೆದುಹಾಕಿದಲ್ಲಿ, ಕಡು ಬಡತನದಲ್ಲಿರುವ 300 ಕುಟುಂಬಗಳು ಬೀದಿಗೆ ಬೀಳುವುದು ನಿಶ್ಚಿತವಾಗಿದೆ. ಹಲವಾರು ವರ್ಷಗಳಿಂದ ಕಡುಬಡ ಕುಟುಂಬಗಳು ಕಷ್ಟಪಟ್ಟು ಜೀವನದಲ್ಲಿ ಮೇಲೆ ಬರುತ್ತಿರುವ ಸಂದರ್ಭದಲ್ಲಿ ರಸ್ತೆ ಅಗಲೀಕರಣ ಮಾಡಿದರೆ ಬಡ ಕುಟುಂಬಗಳು ಇನ್ನಷ್ಟು ಕಷ್ಟದ ಪರಿಸ್ಥಿತಿಗೆ ಹೋಗಬೇಕಾಗುತ್ತದೆ ಎಂದು ವಿಷಾದ ವ್ಯಕ್ತಪಡಿಸಿದರು.
ಹೀಗಾಗಿ, ಬಡಜನರ ಕಾಳಜಿಯುಳ್ಳ ಅಧಿಕಾರಿಗಳಾದ ತಾವುಗಳು ಸವಾರ್ಲೈನ್ ರಸ್ತೆಯ ಅಗಲೀಕರಣವನ್ನು ಕೈಬಿಡುವಂತೆ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು ಪ್ರತಿಭಟನಾನಿರತರು ಒಕ್ಕೊರಲಿನಿಂದ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಆರ್.ಶಿವಕುಮಾರ್, ಬಾಲರಾಜ್, ಕೃಷ್ಣಮೂರ್ತಿ, ಮಂಜುನಾಥ್, ರಂಗಸ್ವಾಮಿ, ರಘು, ಮಧು, ರಮೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
-
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications