ಇಬ್ಬರ ಜಗಳದಲಿ ಮೂಗು ತೂರಿಸಿದ ಕರವೇ
ಶಿವಮೊಗ್ಗ, ಸೆ. 15 : ನಗರದ ಪಾರ್ಕ್ ಬಡಾವಣೆಯ ಮುಖ್ಯರಸ್ತೆಯಲ್ಲಿ ನೂತನವಾಗಿ ಆರಂಭವಾಗಿರುವ ವಾತ್ಸಲ್ಯ ಆಸ್ಪತ್ರೆ ಸಾಕಷ್ಟು ವಿವಾದದ ಕೇಂದ್ರ ಬಿಂದುವಾಗಿದ್ದು, ನಗರಸಭೆ ಸಿಬ್ಬಂದಿ ಆಕಸ್ಮಿಕವಾಗಿ ಈ ಆಸ್ಪತ್ರೆಯ ಎದುರು ಕಸ ಹಾಕಿದ ಕಾರಣಕ್ಕಾಗಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಮತ್ತು ನಗರಸಭೆಯ ಅಧಿಕಾರಿಗಳು, ಸದಸ್ಯರ ನಡುವೆ ದೊಡ್ಡ ಜಗಳವೇ ನಡೆದ ಘಟನೆ ಮಂಗಳವಾರ ಅಪರಾಹ್ನ ನಡೆಯಿತು.
ನೂತನವಾಗಿ ಆರಂಭವಾಗಿರುವ ವಾತ್ಸಲ್ಯ ಆಸ್ಪತ್ರೆ ನಗರಸಭೆಯಿಂದ ಯಾವುದೇ ಪರವಾನಗಿಯನ್ನು ಪಡೆದಿಲ್ಲ. ರಸ್ತೆ ಅಗೆಯಲು ಮತ್ತಿತರೆ ಕಾಮಗಾರಿಗಳಿಗೂ ಸಹ ವಾತ್ಸಲ್ಯ ಆಸ್ಪತ್ರೆಯ ಆಡಳಿತ ಮಂಡಳಿ ಪರವಾನಗಿ ಪಡೆಯದೆ ಕೆಲಸ ನಿರ್ವಹಿಸುತ್ತಿತ್ತು. ಆಸ್ಪತ್ರೆಯ ತ್ಯಾಜ್ಯ ವಸ್ತುಗಳನ್ನು ನೇರವಾಗಿ ಚರಂಡಿಗೆ ಎಸೆಯಲಾಗುತ್ತಿತ್ತು. ಈ ಬಗ್ಗೆ ನಗರಸಭೆ ಸಿಬ್ಬಂದಿ ವಿಚಾರಿಸಲು ಹೋದಾಗ ಈ ಕದನ ನಡೆಯಿತು.
ಆಸ್ಪತ್ರೆ ಸಿಬ್ಬಂದಿಗಳ ವರ್ತನೆಯಿಂದ ಬೇಸತ್ತ ನಗರಸಭೆ ಸಿಬ್ಬಂದಿ ತ್ರಿಚಕ್ರ ವಾಹನದಲ್ಲಿ ಒಯ್ಯಬೇಕಿದ್ದ ತ್ಯಾಜ್ಯ ವಸ್ತುಗಳನ್ನು ವಾತ್ಸಲ್ಯ ಆಸ್ಪತ್ರೆಯ ಎದುರು ಚೆಲ್ಲಿದರು. ಈ ಕ್ಷಣದಲ್ಲಿ ನಗರಸಭೆ ಸಿಬ್ಬಂದಿ ಮತ್ತು ಆಸ್ಪತ್ರೆಯ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಪ್ರವೀಣ್ ಶೆಟ್ಟಿ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ನಗರಸಭೆಯ ಸಿಬ್ಬಂದಿಗಳ ಜೊತೆ ಮಾತಿಗಿಳಿದರು. ಜಗಳ ತಾರಕಕ್ಕೇರಿದಾಗ ನಗರಸಭೆಯ ಅಧ್ಯಕ್ಷ ಎನ್.ಜೆ.ರಾಜಶೇಖರ್, ಸದಸ್ಯ ಮರಿಯಪ್ಪ, ಆಯುಕ್ತ ಜಯಣ್ಣ ಸೇರಿದಂತೆ ಪೌರ ಕಾರ್ಮಿಕರು ವಾತ್ಸಲ್ಯ ಆಸ್ಪತ್ರೆ ಎದುರು ಬಂದರು.
ಮರಿಯಪ್ಪ ಮಾತಿನ ಸಂಧಾನದ ಮೂಲಕ ಸಮಸ್ಯೆಯನ್ನು ಬಗೆಹರಿಸಲು ಪ್ರಯತ್ನಿಸಿದರು. ಆದರೆ, ಅವರ ವಿರುದ್ಧವೇ ಪ್ರವೀಣ್ ಶೆಟ್ಟಿ ನೇತೃತ್ವದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ತಿರುಗಿಬಿದ್ದರು. ಅವಾಚ್ಯ ಶಬ್ದಗಳು ಕಿವಿ ಕೊರೆದವು. ಕಾರ್ಯಕರ್ತರು ಸ್ಥಳಕ್ಕಾಗಮಿಸಿದ ಆಯುಕ್ತ ಜಯಣ್ಣರನ್ನು ಎಳೆದಾಡುವಂತಾಯಿತು. ಈ ಸಂದರ್ಭದಲ್ಲಿ ಎಲ್ಲಾ ಮುಗಿದ ಮೇಲೆ ಕೋಟೆ ಠಾಣೆಯ ಪೊಲೀಸರು ಆಗಮಿಸಿದರು. ಅಷ್ಟರಲ್ಲಾಗಲೇ ಕದನ ಮತ್ತಷ್ಟು ಗಂಭೀರಗೊಂಡಿತ್ತು.
ಪ್ರಕರಣ ದಾಖಲಿಸಲು ಒತ್ತಾಯ
ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಕಾರ್ಯಕರ್ತರು ವಿನಾ ಕಾರಣ, ಅತಿರೇಕದಿಂದ ನಗರಸಭೆಯ ಆಯುಕ್ತ ಜಯಣ್ಣ ಹಾಗೂ ಪೌರ ನೌಕರರ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ, ವಿವಿಧ ದಲಿತ ಹಾಗೂ ಜನಪರ ಸಂಘಟನೆಗಳು ಒಗ್ಗೂಡಿ, ಕರವೇ ಕಾರ್ಯಕರ್ತರನ್ನು ಬಂಧಿಸಬೇಕು. ಇಲ್ಲದಿದ್ದಲ್ಲಿ, ಎಲ್ಲಾ ಸಂಘಟನೆಗಳು ಒಟ್ಟಾಗಿ, ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆಂದು ದಲಿತ ಮುಖಂಡ ಪಡುವಳ್ಳಿ ಹರ್ಷೇಂದ್ರ ಕುಮಾರ್ ಒತ್ತಾಯಿಸಿದರು.
ಅಲ್ಲದೇ, ಡಿಎಸ್ಎಸ್ ಜಿಲ್ಲಾ ಸಂಚಾಲಕ ಜಿ.ಎಸ್.ತಿಪ್ಪೇಸ್ವಾಮಿ, ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಹೆಚ್.ಎನ್.ಪ್ರಭು, ಡಾ|.ಬಿ.ಆರ್.ಅಂಬೇಡ್ಕರ್ ದಲಿತ ಸಮಿತಿಯ ಅಧ್ಯಕ್ಷ ಕೆ.ಕುಮಾರ್, ಡಿವಿಎಸ್ ಕಾರ್ಯಾಧ್ಯಕ್ಷ ರಾಜು, ಬಾಬು ಜಗಜೀವನರಾಮ್ ಸಮಿತಿಯ ಅಧ್ಯಕ್ಷ ಡಿ.ಕೆ.ಮಂಜುನಾಥ್ರವರು ಕೋಟೆ ಠಾಣೆಯ ಸರ್ಕಲ್ ಇನ್ಸ್ಪೆಕ್ಟರ್ ವಸಂತ್ಕುಮಾರ್ರವರನ್ನು ಕರವೇ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications