ಯಡಿಯೂರಪ್ಪ ಫಾಸ್ಟೆಸ್ಟ್ ಮೂವಿಂಗ್ ಅವಾರ್ಡ್ ಗರಿ
ನವದೆಹಲಿ,
ಸೆ. 15 : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿರ್ವಹಿಸುವಲ್ಲಿ ಸರಕಾರ ವಿಫಲವಾಗಿದೆ ಎಂಬ ರಾಜ್ಯಪಾಲರ ವಿವಾದಾತ್ಮಕ ಹೇಳಿಕೆ ಜೊತೆಗೆ ಪ್ರತಿಪಕ್ಷಗಳ ಬೊಬ್ಬೆಯ ನಡುವೆಯೇ ಇದೇ ಕರ್ತವ್ಯದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂಬ ಪ್ರಶಂಸೆಗೆ ಪಾತ್ರರಾಗಿದ್ದಾರೆ. id="toptextpromo">ಕಾನೂನು
ಸುವ್ಯವಸ್ಥೆ ನಿರ್ವಹಣೆಯಲ್ಲಿ ಯಡಿಯೂರಪ್ಪ ಅವರಿಗೆ ಫಾಸ್ಟೆಸ್ಟ್ ಮೂವರ್ ಪ್ರಶಸ್ತಿ ಪ್ರಶಸ್ತಿ ಲಭಿಸಿದೆ. ಇಂಡಿಯಾ ಟುಡೇ ಕೊಡಮಾಡುವ ಈ ಪ್ರಶಸ್ತಿಯನ್ನು ಕೇಂದ್ರದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರು ಯಡಿಯೂರಪ್ಪ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ಈ ಪ್ರಶಸ್ತಿ ಖುಷಿ ತಂದು ಕೊಟ್ಟಿದೆ. ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ನನ್ನ ಆತ್ಮಸ್ಥೈರ್ಯ ಹೆಚ್ಚಿಸಿದೆ. ವಿರೋಧಪಕ್ಷಗಳ ಆಧಾರ ರಹಿತ ಟೀಕೆಗಳ ಮಧ್ಯೆ ಇಂಡಿಯಾ ಟುಡೇ ಸಮೂಹ ಕರ್ನಾಟಕ ಸರಕಾರ ಕಾನೂನು ಸುವ್ಯವಸ್ಥೆ ಕಾಪಾಡಿಕೊಂಡು ಹೋಗುವಲ್ಲಿ ನಡೆಸುತ್ತಿರುವ ಪ್ರಯತ್ನಗಳನ್ನು ಗುರುತಿಸಿದೆ ಎಂದು ಸಂತಸ ವ್ಯಕ್ತಪಡಿಸಿದರು. id='are-slot-1' class='oiad oi-axt oiadv'> id='top-searched-articles'>(ಏಜನ್ಸೀಸ್)












Click it and Unblock the Notifications