ರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು
ನವದೆಹಲಿ,
ಸೆ. 16 : ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಅಮೃತಸರ-ನವದೆಹಲಿ ಶತಾಬ್ಧಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದ ವೇಳೆ ಪಾಣಿಪತ್ ಬಳಿ ಕಿಡಿಗೇಡಿಗಳು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. id="toptextpromo">ರಾಹುಲ್
ಗಾಂಧಿ ಅವರು ಕುಳಿತಿದ್ದ ಬೋಗಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಇತರ ಕೆಲ ಬೋಗಿಗಳ ಕಿಟಿಕಿ ಗಾಜುಗಳು ಪುಡಿಪುಡಿಯಾಗಿವೆ. ಕಲ್ಲೆಸೆತ ನಡೆಸಲು ಕಾರಣವೇನೆಂದು ಗೊತ್ತಾಗಿಲ್ಲ. ರಾಹುಲ್ ಅವರು ಅಮೃತಸರದಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರುಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರಾತ್ರಿ 11 ಗಂಟೆಗೆ ರಾಹುಲ್ ಗಾಂಧಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ಏಜನ್ಸೀಸ್)












Click it and Unblock the Notifications