ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು

By Staff
|
Google Oneindia Kannada News

Austerity Drive: Rahul Gandhi's train stoned
ನವದೆಹಲಿ, ಸೆ. 16 : ಕಾಂಗ್ರೆಸ್ ಯುವನಾಯಕ ರಾಹುಲ್ ಗಾಂಧಿ ಅವರು ಪ್ರಯಾಣಿಸುತ್ತಿದ್ದ ಅಮೃತಸರ-ನವದೆಹಲಿ ಶತಾಬ್ಧಿ ಎಕ್ಸ್ ಪ್ರೆಸ್ ರೈಲಿನಲ್ಲಿ ಮರಳುತ್ತಿದ್ದ ವೇಳೆ ಪಾಣಿಪತ್ ಬಳಿ ಕಿಡಿಗೇಡಿಗಳು ರೈಲಿನ ಮೇಲೆ ಕಲ್ಲು ತೂರಾಟ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.

ರಾಹುಲ್ ಗಾಂಧಿ ಅವರು ಕುಳಿತಿದ್ದ ಬೋಗಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಇತರ ಕೆಲ ಬೋಗಿಗಳ ಕಿಟಿಕಿ ಗಾಜುಗಳು ಪುಡಿಪುಡಿಯಾಗಿವೆ. ಕಲ್ಲೆಸೆತ ನಡೆಸಲು ಕಾರಣವೇನೆಂದು ಗೊತ್ತಾಗಿಲ್ಲ. ರಾಹುಲ್ ಅವರು ಅಮೃತಸರದಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರುಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರಾತ್ರಿ 11 ಗಂಟೆಗೆ ರಾಹುಲ್ ಗಾಂಧಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X