ರಾಹುಲ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲೇಟು

ರಾಹುಲ್ ಗಾಂಧಿ ಅವರು ಕುಳಿತಿದ್ದ ಬೋಗಿಗೆ ಯಾವುದೇ ಹಾನಿಯಾಗಿಲ್ಲ. ಆದರೆ, ಇತರ ಕೆಲ ಬೋಗಿಗಳ ಕಿಟಿಕಿ ಗಾಜುಗಳು ಪುಡಿಪುಡಿಯಾಗಿವೆ. ಕಲ್ಲೆಸೆತ ನಡೆಸಲು ಕಾರಣವೇನೆಂದು ಗೊತ್ತಾಗಿಲ್ಲ. ರಾಹುಲ್ ಅವರು ಅಮೃತಸರದಲ್ಲಿ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮರುಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಪೊಲೀಸರು ತನಿಖೆ ಕೈಗೊಂಡಿದ್ದಾರೆ. ರಾತ್ರಿ 11 ಗಂಟೆಗೆ ರಾಹುಲ್ ಗಾಂಧಿ ಸುರಕ್ಷಿತವಾಗಿ ನವದೆಹಲಿ ತಲುಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
(ಏಜನ್ಸೀಸ್)












Click it and Unblock the Notifications