ಪ್ರೇಮ ಪ್ರಸಂಗ ಅಪ್ರಾಪ್ತೆಯೊಂದಿಗೆ ಪಾದ್ರಿ ಪರಾರಿ
ಬೆಂಗಳೂರು, ಸೆ. 16 : ಸಂಗೀತ ಕಲಿಸುತ್ತಿದ್ದ ಪಾದ್ರಿಯೊಬ್ಬ ಅಪ್ರಾಪ್ತ ಶಿಷ್ಯೆಯೊಂದಿಗೆ ಪರಾರಿಯಾದ ಘಟನೆ ಹೈಕೋರ್ಟ್ ನಲ್ಲಿ ಬೆಳಕಿಗೆ ಬಂದಿದೆ. ನಾಪತ್ತೆಯಾದ ಗುರು-ಶಿಷ್ಯೆಯನ್ನು ನಾಲ್ಕೈದು ರಾಜ್ಯದಲ್ಲಿ ಹುಡುಕಿದರೂ ಪತ್ತೆಯಾಗದೆ, ಪೊಲೀಸರು ಪರದಾಡುವಂತಾಗಿದೆ.
ಬೆಂಗಳೂರಿನ ವ್ಯಾಪಾರಿ ಸಮುದಾಯದ ಶ್ರೀಮಂತ ತಂದೆ ಹದಿನಾರು ವರ್ಷದ ಮಗಳಲ್ಲಿದ್ದ ಸಂಗೀತಾಸಕ್ತಿ ಗಮನಿಸಿ, ಕಲಿಕೆಗೆ ಕಳುಹಿಸುತ್ತಾರೆ. ಹದಿಹರೆಯದ ಹುಡುಗಿ ಮನೆಗೆ ಬಂದರೆ ಸಂಗೀತ ಮೇಷ್ಟ್ರ ಕುರಿತೇ ಮಾತು. ಚೆನ್ನಾಗಿ ಕಲಿಸುತ್ತಾರೆ. ಗಿಳಿಗೆ ಹೇಳಿದಂತೆ ಕಲಿಸುತ್ತಾರೆ ಎಂದು ಗುರುವಿನ ಗುಣಗಾನ. ಪೊಷಕರಿಗೆ ಯಾವುದೇ ಅನುಮಾನ ಬರಲಿಲ್ಲ. ಮಗಳು ಚೆನ್ನಾಗಿ ಕಲಿಯಲಿ ಎಂದು ಉತ್ತೇಜಿಸುತ್ತಿದ್ದರು. ಆದರೆ, ಮಗಳು ಒಂದು ದಿನ ಏಕಾಏಕಿ ನಾಪತ್ತೆ. ಅದೂ ಸಂಗೀತ ಕಲಿಸುವ ಗುರುವಿನೊಂದಿಗೆ!
ಅಪ್ರಾಪ್ತ ವಯಸ್ಸಿನ ಮಗಳ ಮನಸ್ಸು ಕೆಡಿಸಿ ಪಾದ್ರಿ ಅಪಹರಿಸಿದ್ದಾರೆ. ಆಕೆಯನ್ನು ಹುಡುಕಿಕೊಡಿ ಎಂದು ಪೊಲೀಸರಿಗೆ ದೂರು ನೀಡಲಾಗಿತ್ತು. ಪೊಲೀಸರು ಕ್ರಮಬದ್ದವಾಗಿ ತನಿಖೆ ನಡೆಸುತ್ತಿಲ್ಲ ಎಂದು ಪೊಷಕರು ಸಲ್ಲಿಸಿದ ಹೇಬಿಯಸ್ ಕಾರ್ಪಸ್ ರಿಟ್ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಇಬ್ಬರನ್ನೂ ಹುಡುಕಿ ತರುವಂತೆ ಪೊಲೀಸರಿಗೆ ಈ ಹಿಂದೆ ಆದೇಶಿಸಿತ್ತು.
ಮಂಗಳವಾರ ನ್ಯಾಯಮೂರ್ತಿ ಮಂಜುಳಾ ಚೆಲ್ಲೂರು ಹಾಗೂ ನ್ಯಾಯಮೂರ್ತಿ ಜವ್ವಾದ್ ರಹೀಂ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು. ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳದಲ್ಲಿ ಹುಡುಕಲಾಗಿದೆ. ಚರ್ಚ್ ಆಡಳಿತಕ್ಕೆ ಸಂಬಂಧಿಸಿದ ಸ್ಥಳಗಳಲ್ಲಿ ಹುಡುಕಿದರೂ ಪತ್ತೆಯಾಗಿಲ್ಲ. ನಾಪತ್ತೆಯಾದ ಪಾದ್ರಿಗೆ ದೀಕ್ಷೆ ನೀಡಿದ ಗುರುಗಳನ್ನೂ ವಿಚಾರಿಸಲಾಗಿದೆ. ದೀಕ್ಷೆ ನೀಡಿದ್ದು ನಿಜ. ಆದರೆ, ಆತನ ಬಗ್ಗೆ ಹೆಚ್ಚಿಗೆ ಗೊತ್ತಿಲ್ಲ ಎಂದಿದ್ದಾರೆ ಎಂಬ ವರದಿಯನ್ನು ಪೊಲೀಸರು ಪೀಠಕ್ಕೆ ಸಲ್ಲಿಸಿದರು. ವಿಚಾರಣೆ ಬಳಿಕ ಪಾದ್ರಿಯ ಸಂಬಂಧಿಕರನ್ನು ಕರೆ ತರಲು ಪೀಠ ಆದೇಶಿಸಿದೆ.
(ದಟ್ಸ್ ಕನ್ನಡ ವಾರ್ತೆ)
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications