ಪಿಡಿ ದಿನಕರನ್ ಮೇಲೆ ಆಕ್ರಮ ಆಸ್ತಿ ಆರೋಪ
ಬೆಂಗಳೂರು,
ಸೆ. 16 : ಕರ್ನಾಟಕದ ಹೈಕೋರ್ಟ್ ನ ಮುಖ್ಯನ್ಯಾಯಮೂರ್ತಿ ಪಿ ಡಿ ದಿನಕರನ್ ಅವರು ಅಕ್ರಮ ಆಸ್ತಿ ಹೊಂದಿರುವ ಆರೋಪಕ್ಕೆ ಒಳಗಾಗಿರುವ ಸಂಗತಿ ಬೆಳಕಿಗೆ ಬಂದಿದೆ. ಅಗತ್ಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಕೆ ಜಿ ಬಾಲಕೃಷ್ಣನ್ ಅವರು ವಿವರಣೆ ನೀಡುವಂತೆ ದಿನಕರನ್ ಗೆ ಸೂಚನೆ ನೀಡಿದ್ದಾರೆ. id="toptextpromo">ತಮಿಳುನಾಡಿನಲ್ಲಿ
ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಪಿಡಿ ದಿನಕರನ್ ಅವರು ಅಪಾರ ಅಕ್ರಮ ಆಸ್ತಿ ಗಳಿಸಿದ್ದಾರೆ. ಸುಮಾರು 450 ಎಕರೆ ಜಮೀನನ್ನು ಅವರು ಖರೀದಿಸಿದ್ದಾರೆ. ಜೊತೆಗೆ 500 ಮಂದಿ ಭಾರಿ ಪ್ರಮಾಣದಲ್ಲಿ ಅಪರಾಧ ಎಸಗಿದ ಅರೋಪಿಗಳಿಗೆ ಜಾಮೀನು ನೀಡಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಹಿರಿಯ ನ್ಯಾಯವಾದಿಗಳಾದ ಶಾಂತಿಭೂಷಣ್, ಪಾಲಿ ನಾರಿಮನ್ ಮತ್ತು ಅನಿಲ್ ದಿವಾನ್ ಅವರುಗಳು ಸುಪ್ರಿಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಾ ಕೆ ಡಿ ಬಾಲಕೃಷ್ಣನ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ವಿವರಣೆ ನೀಡುವಂತೆ ಬಾಲಕೃಷ್ಣನ್ ಅವರು ದಿನಕರನ್ ಅವರಿಗೆ ಸೂಚನೆ ನೀಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications