ಸಲಿಂಗರತಿ : ಕೋರ್ಟ್ ತೀರ್ಪಿಗೆ ಕೇಂದ್ರ ಬದ್ಧ

ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಖಾತೆ ಸಚಿವೆ ಅಂಬಿಕಾ ಸೋನಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡುತ್ತಿದ್ದರು. ಸಲಿಂಗರತಿಗೆ ದೆಹಲಿ ಹೈಕೋರ್ಟ್ ಹಸಿರು ನಿಶಾನೆ ತೋರಿದೆ. ಸಲಿಂಗ ರತಿ ಸಕ್ರಮ ಕುರಿತು ಕೋರ್ಟ್ ನೀಡಿದ ತೀರ್ಪಿನ ಸಾಧಕ ಬಾಧಕಗಳ ಅವಲೋಕನ ಮಾಡಲು ಗೃಹ ಸಚಿವ ಪಿ ಚಿದಂಬರಂ, ಆರೋಗ್ಯ ಸಚಿವ ಗುಲಾಮ್ ನಬಿ ಅಜಾದ್ ಮತ್ತು ಕಾನೂನು ಮತ್ತು ಸಂಸದೀಯ ಖಾತೆ ಸಚಿವ ಎಂ ವೀರಪ್ಪ ಮೊಯ್ಲಿ ಅವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿತ್ತು.
ಸಮಿತಿ ನೀಡಿದ ವರದಿಯ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸುಪ್ರಿಂಕೋರ್ಟ್ ಮೆಟ್ಟಿಲೇರುವ ಕ್ರಮವನ್ನು ಕೈಬಿಟ್ಟಿದೆ. ಆದರೆ, ಕೇಂದ್ರ ಸರಕಾರ ಈ ತೀರ್ಪಿನ ಬಗ್ಗೆ ಯಾವ ನಿಲುವು ತೆಗೆದುಕೊಳ್ಳಲಿದೆ ಎನ್ನುವುದನ್ನು ಅವರು ಸ್ಪಷ್ಟಪಡಿಸಲಿಲ್ಲ. ಕೇಂದ್ರ ಸರಕಾರ ಸುಪ್ರಿಂಕೋರ್ಟ್ ಮೊರೆ ಹೋಗುವುದಿಲ್ಲ ಎಂದಷ್ಟೆ ಹೇಳಿದರು.
(ಏಜನ್ಸೀಸ್)












Click it and Unblock the Notifications