ಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಬಿಬಿಎಂಪಿಗೆ ಅಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆ ಪ್ರಕಟಿಸುವಂತೆ ನಿರ್ದೇಶನ ನೀಡಿದೆ. ಅ.23ರೊಳಗೆ ಚುನಾವಣಾ ಪ್ರಕ್ರಿಯೆ ಪ್ರಕಟಿಸುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 2 ನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.
ಬಿಬಿಎಂಪಿ ವಾರ್ಡ್ ವಿಂಗಡಣೆ, ಮೀಸಲಾತಿಯ ಅಧಿಸೂಚನೆಗಳನ್ನು ಸರಕಾರ ಮುಂದಿನ ಏಳು ದಿನಗಳಲ್ಲಿ ಹೊರಡಿಸುವಂತೆ ಸೂಚಿಸಿ, ಅಕ್ಟೋಬರ್ 9 ರೊಳಗೆ ಮೀಸಲಾತಿ ಅಂತಿಮ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಹಸ್ತಾಂತರಿಸುವಂತೆ ಅಡ್ವೋಕೇಟ್ ಜನರಲ್ ಅಶೋಕ್ ಹಾರ್ನಳ್ಳಿ ಅವರಿಗೆ ಪೀಠ ಆದೇಶಿಸಿದೆ.
ಬಿಬಿಎಂಪಿಗೆ ಚುನಾವಣೆ ನಡೆಸಲು ಮತಯಂತ್ರ ಖರೀದಿ ಮತ್ತಿತರ ವ್ಯವಸ್ಥೆಗೆ ಸುಮಾರು 14 ಕೋಟಿ ರುಪಾಯಿ ವೆಚ್ಚ ತಗುಲಲಿದ್ದು, ಈ ಹಣವನ್ನು ಎರಡು ಹಂತಗಳಲ್ಲಿ ಸರಕಾರ ಪಾವತಿಸಬೇಕು. ಮೊದಲ ಕಂತಾಗಿ ಅಕ್ಟೋಬರ್ ಏಳರೊಳಗೆ ಆಯೋಗಕ್ಕೆ ಪಾವತಿಸುವಂತೆ ಪೀಠ ಸೂಚಿಸಿದೆ. ಅಕ್ಟೋಬರ್ 15ರೊಳಗೆ ಎರಡನೇ ಕಂತು ಆಯೋಗಕ್ಕೆ ಪಾವತಿಸಬೇಕು ಎಂದು ಪೀಠ ಹೇಳಿದೆ. ಕಳೆದ ಮೂರು ವರ್ಷಗಳಿಂದ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ. ಮಾಜಿ ಮೇಯರ್ ಪಿ ರಮೇಶ್ ಅವರು ಸರಕಾರದ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications