ಬಿಬಿಎಂಪಿ : ಅ 23ರೊಳಗೆ ಚುನಾವಣೆ ಪ್ರಕ್ರಿಯೆ

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿಡಿ ದಿನಕರನ್ ಹಾಗೂ ಸಭಾಹಿತ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಬಿಬಿಎಂಪಿಗೆ ಅಕ್ಟೋಬರ್ 23ರೊಳಗೆ ಚುನಾವಣಾ ಪ್ರಕ್ರಿಯೆ ಪ್ರಕಟಿಸುವಂತೆ ನಿರ್ದೇಶನ ನೀಡಿದೆ. ಅ.23ರೊಳಗೆ ಚುನಾವಣಾ ಪ್ರಕ್ರಿಯೆ ಪ್ರಕಟಿಸುವಂತೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ನವೆಂಬರ್ 2 ನೇ ವಾರದಲ್ಲಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ.
ಬಿಬಿಎಂಪಿ ವಾರ್ಡ್ ವಿಂಗಡಣೆ, ಮೀಸಲಾತಿಯ ಅಧಿಸೂಚನೆಗಳನ್ನು ಸರಕಾರ ಮುಂದಿನ ಏಳು ದಿನಗಳಲ್ಲಿ ಹೊರಡಿಸುವಂತೆ ಸೂಚಿಸಿ, ಅಕ್ಟೋಬರ್ 9 ರೊಳಗೆ ಮೀಸಲಾತಿ ಅಂತಿಮ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗಕ್ಕೆ ಹಸ್ತಾಂತರಿಸುವಂತೆ ಅಡ್ವೋಕೇಟ್ ಜನರಲ್ ಅಶೋಕ್ ಹಾರ್ನಳ್ಳಿ ಅವರಿಗೆ ಪೀಠ ಆದೇಶಿಸಿದೆ.
ಬಿಬಿಎಂಪಿಗೆ ಚುನಾವಣೆ ನಡೆಸಲು ಮತಯಂತ್ರ ಖರೀದಿ ಮತ್ತಿತರ ವ್ಯವಸ್ಥೆಗೆ ಸುಮಾರು 14 ಕೋಟಿ ರುಪಾಯಿ ವೆಚ್ಚ ತಗುಲಲಿದ್ದು, ಈ ಹಣವನ್ನು ಎರಡು ಹಂತಗಳಲ್ಲಿ ಸರಕಾರ ಪಾವತಿಸಬೇಕು. ಮೊದಲ ಕಂತಾಗಿ ಅಕ್ಟೋಬರ್ ಏಳರೊಳಗೆ ಆಯೋಗಕ್ಕೆ ಪಾವತಿಸುವಂತೆ ಪೀಠ ಸೂಚಿಸಿದೆ. ಅಕ್ಟೋಬರ್ 15ರೊಳಗೆ ಎರಡನೇ ಕಂತು ಆಯೋಗಕ್ಕೆ ಪಾವತಿಸಬೇಕು ಎಂದು ಪೀಠ ಹೇಳಿದೆ. ಕಳೆದ ಮೂರು ವರ್ಷಗಳಿಂದ ಬಿಬಿಎಂಪಿಗೆ ಚುನಾವಣೆ ನಡೆದಿಲ್ಲ. ಮಾಜಿ ಮೇಯರ್ ಪಿ ರಮೇಶ್ ಅವರು ಸರಕಾರದ ಕ್ರಮದ ವಿರುದ್ಧ ಕಾನೂನು ಹೋರಾಟ ನಡೆಸಿದ್ದರು.
(ದಟ್ಸ್ ಕನ್ನಡ ವಾರ್ತೆ)
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications