ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಟ್ವಿಟರ್ ಪ್ರಭಾವ : ಅಡಕತ್ತರಿಯಲ್ಲಿ ಶಶಿ ತರೂರ್

By Staff
|
Google Oneindia Kannada News

Shashi tharoor
ನವದೆಹಲಿ, ಸೆ. 17 : ಯುಪಿಎ ಸರಕಾರದ ದುಂದುವೆಚ್ಚ ಕಡಿತ ಆಂದೋಲನ ಕುರಿತು ವ್ಯಂಗ್ಯವಾಡಿರುವ ವಿದೇಶಾಂಗ ಖಾತೆ ರಾಜ್ಯ ಸಚಿವ ಶಶಿ ತರೂರ್ ವಿರುದ್ದ ಕಾಂಗ್ರೆಸ್ ಹೈಕಮಾಂಡ್ ಕೆಂಡಾಮಂಡಲವಾಗಿದ್ದು, ಶಿಸ್ತು ಕ್ರಮಕೈಗೊಳ್ಳುವ ಸಾಧ್ಯತೆ ಇದೆ.

ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟರ್ ಪುಟದಲ್ಲಿ ಓದುಗರೊಬ್ಬರು ಶಶಿ ತರೂರ್ ಅವರಿಗೆ ನೀವು ಕೇರಳಕ್ಕೆ ಹೋಗುವಾಗ ಜಾನುವಾರು ದರ್ಜೆಯಲ್ಲಿ ಪ್ರಯಾಣ ಮಾಡುತ್ತೀರಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು ನಮ್ಮ ಪವಿತ್ರ ಜಾನುವಾರುಗಳೊಂದಿಗೆ ಏಕತೆ ಪ್ರದರ್ಶಿಸಲು ನಾನು ಅವುಗಳ ದರ್ಜೆಯಲ್ಲಿ ಪ್ರಯಾಣ ಮಾಡುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.

ಸಚಿವರ ಹೇಳಿಕೆಯಿಂದ ಕಾಂಗ್ರೆಸ್ ಕೆಂಡಾಮಂಡಲವಾಗಿದ್ದು, ಸಚಿವರ ಹೇಳಿಕೆಯನ್ನು ಪಕ್ಷ ಒಪ್ಪುವುದಿಲ್ಲ. ಇದು ರಾಜಕೀಯಕ್ಕೆ ಅಗೌರವ ತರುವಂತಹ ಹೇಳಿಕೆ ಎಂದು ಪಕ್ಷದ ವಕ್ತಾರೆ ಜಯಂತಿ ನಟರಾಜನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆಯೇ ಎಂಬ ಪ್ರಶ್ನಿಗೆ ಅದನ್ನು ಹೈಕಮಾಂಡ್ ತೀರ್ಮಾನಿಸುತ್ತಿದೆ ಎಂದು ಅವರು ಹೇಳಿದರು.

ದೇಶ ಬರ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ನಿಟ್ಟಿನಲ್ಲಿ ಯುಪಿಎ ಹೆಜ್ಜೆಯಿಟ್ಟಿದೆ. ಪ್ರಣಬ್ ಮುಖರ್ಜಿ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಸ್ ಎಂ ಕೃಷ್ಣ ವಿಮಾನಗಳಲ್ಲಿ ಸಾಮಾನ್ಯ ದರ್ಜೆಯಲ್ಲಿ ಪ್ರಯಾಣಿಸಿ ಮಾದರಿಯಾಗಿದ್ದರು.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X