ಯಡಿಯೂರಪ್ಪ ಅನರ್ಹ ಮುಖ್ಯಮಂತ್ರಿ : ದೇವೇಗೌಡ

ನವದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೃಷಿ ಗ್ರಾಮೀಣಾಭಿವೃದ್ಧಿ ಹಾಗೂ ಹಗರಣಗಳಿಗೆ ಸಂಬಂಧಿಸಿದಂತೆ ವಿಶೇಷ ಅಧಿವೇಶನ ಕರೆದಿದ್ದಾರೆ. ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಸಮಗ್ರ ಚರ್ಚೆ ನಡೆಸದೆ ಪಲಾಯನ ಮಾಡಿದ ಯಡಿಯೂರಪ್ಪ, ನಿವೃತ್ತ ಹೈಕೋರ್ಟ್ ನ್ಯಾಯಾಮೂರ್ತಿಗಳಿಂದ ತನಿಖೆ ನಡೆಸುವುದಾಗಿ ಘೋಷಣೆ ಮಾಡಿದ್ದಾರೆ. ಇದು ಯಾವ ಪುರುಷಾರ್ಥಕ್ಕೆ ಎಂದು ಅವರು ಪ್ರಶ್ನಿಸಿದರು.
ಜಾತಿ ಆಧಾರದ ಮೇಲೆ ಯಡಿಯೂರಪ್ಪ ರಾಜಕಾರಣ ಮಾಡುತ್ತಿದ್ದಾರೆ. ಜಾತಿಯ ಪಿತ್ತ ನೆತ್ತಿಗೇರಿದೆ. ಅವರ ಜಾತಿ ರಾಜಕೀಯದಿಂದ ಪಕ್ಷದಲ್ಲಿ ಅನೇಕ ಒಳ್ಳೆಯ ಜನರಿಗೆ ಉಸಿರಾಡಲು ಕಷ್ಟವಾಗಿ ಮೂಲುಗುಂಪಾಗಿದ್ದಾರೆ ಎಂದು ಆರೋಪಿಸಿದರು. ಯಡಿಯೂರಪ್ಪ ಮುಖ್ಯಮಂತ್ರಿ ಆಗಲಿಕ್ಕೆ ನಾಲಾಯಕ್ಕು. ಇಂತಹ ವ್ಯಕ್ತಿಯಿಂದ ರಾಜ್ಯದ ಅಭಿವೃದ್ಧಿ ಬರೀ ಕನಸು ಎಂದು ದೇವೇಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
(ಏಜನ್ಸೀಸ್)












Click it and Unblock the Notifications