ತೀರ್ಥೋದ್ಭವ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಭೆ
ಮಡಿಕೇರಿ,
ಸೆ. 18 : ಅಕ್ಟೋಬರ್ 17 ರಂದು ತಲಕಾವೇರಿಯಲ್ಲಿ ನಡೆಯಲಿರುವ ತೀರ್ಥೋದ್ಭವ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಲಾಯಿತು. ಮಡಿಕೇರಿ ಜಿಲ್ಲಾಧಿಕಾರಿ ಅಶ್ವಥ್ ನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ವಿವಿಧ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. id="toptextpromo">ತೀರ್ಥೋದ್ಭವ
ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ನಿರ್ಧರಿಸಲಾಗಿದ್ದು. ಲೋಕೋಪಯೋಗಿ, ಪೊಲೀಸ್, ಅರಣ್ಯ, ಚೆಸ್ಕಾಂ ಸೇರಿ ವಿವಿಧ ಇಲಾಖೆಗಳು ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿಕೊಳ್ಳಲಾಗಿದೆ. ಭಕ್ತಾಧಿಗಳ ಅನುಕೂಲಕ್ಕಾಗಿ ರಸ್ತೆಗಳ ದುರಸ್ತಿ ಹಾಗೂ ಕಾರ್ಯಕ್ರಮದ ವೇಳೆಯಲ್ಲಿ ನಿರಂತರ ವಿದ್ಯುತ್ ಸಂಪರ್ಕಕ್ಕೆ ಒದಗಿಸುವಂತೆ ಸಂಬಂಧಿಸಿದ ಇಲಾಖೆಗೆ ತಿಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications